ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಸರಕಾರಿ ನೌಕರರ ಸಂಘದ ಚುನಾವಣೆ: ಅಧ್ಯಕ್ಷರಾಗಿ ಜಯರಾಜ ಜೈನ್, ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ ಸದಸ್ಯರಾಗಿ ಪ್ರದೀಪ್ ಕುಮಾರ್ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಳ್ತಂಗಡಿ ಶಾಖೆ ಇದರ 2024-29ನೇ ಸಾಲಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷ, ಖಜಾಂಚಿ, ರಾಜ್ಯ ಪರಿಷತ್ ಸ್ಥಾನ ಸ್ಥಾನಕ್ಕೆ ನ.೧೬ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಜಯರಾಜ ಜೈನ್,ಖಜಾಂಚಿಯಾಗಿ ನಾರಾಯಣ ಶೆಟ್ಟಿ, ರಾಜ್ಯ ಪರಿಷತ್‌ಸದಸ್ಯರಾಗಿ ಪ್ರದೀಪ್ ಅವರು ಚುನಾಯಿತರಾಗಿದ್ದಾರೆ.

ಬಹಳಷ್ಟು ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟ ಈ ಚುನಾವಣೆಯಲ್ಲಿ 22ಮಂದಿ ನಿರ್ದೇಶಕರು ಮತದಾನ ಮಾಡಿದ್ದರು. ಸಂಜೆ ಮತದಾನದ ಬಳಿಕ ಮತ ಏಣಿಕೆ ನಡೆಯಿತು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಹಾಲಿ ಅಧ್ಯಕ್ಷ ಜಯರಾಜ್ ಜೈನ್ 17 ಮತಗಳನ್ನು ಪಡೆದು ಚುನಾಯಿತರಾದರು. ಅವರ ಪ್ರತಿಸ್ಪರ್ಧಿ ತಾ.ಪಂ ವ್ಯವಸ್ಥಾಪಕ ಪ್ರಶಾಂತ್ ಡಿ. ಬಳಂಜ ಅವರಿಗೆ 7 ಮತ ದೊರಕಿ ಅವರು ಸೋಲು ಅನುಭವಿಸಿದರು. ಖಜಾಂಚಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಲೋಕೋಪಯೋಗಿ ಇಲಾಖೆಯ ನಾರಾಯಣ ಶೆಟ್ಟಿ 17 ಮತ ಪಡೆದು ಆಯ್ಕೆಯಾದರೆ ಅವರ ಎದುರಾಳಿ, ಪಶುವೈದ್ಯ ಇಲಾಖೆಯ ಹಿರಿಯ ಪಶುವೈದ್ಯಕೀಯ ಪರೀಕ್ಷಕ ಸದಾಶಿವ ಭಟ್ ಕೆ. 5 ಮತ ಪಡೆದು ಸೋಲುಂಡರು.


ರಾಜ್ಯ ಪರಿಷತ್ ಸ್ಥಾನಕ್ಕೆ ಸ್ಪರ್ಧಿಸಿದ್ದ ಗ್ರಾಮ ಲೆಕ್ಕಾಧಿಕಾರಿ ಪ್ರದೀಪ್ ಕುಮಾರ್ ಸಿ. 8 ಮತ ಪಡೆದು ಆಯ್ಕೆಯಾಗಿದ್ದಾರೆ. ಇವರ ಪ್ರತಿಸ್ಪರ್ಧಿ ಸರಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕ ಆನಂದ ಡಿ. 7 ಮತ ಮತ್ತು ಆರೋಗ್ಯ ಇಲಾಖೆಯ ಸೋಮನಾಥ ಎಂ.ಆರ್ 7 ಮತ ಪಡೆದು ಸೋಲುಂಡರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ನಾರಾಯಣ ನಾಯ್ಕ ಅವರು ಕಾರ್ಯನಿರ್ವಹಿಸಿದ್ದರು.

Related posts

ಹೊಸಂಗಡಿ: ಗಾಳಿ ಮಳೆಗೆ 5 ಮನೆಗಳಿಗೆ ಹಾನಿ : ಸ್ಥಳಕ್ಕೆ ಪಂಚಾಯತು, ಕಂದಾಯ ಅಧಿಕಾರಿಗಳ ಭೇಟಿ

Suddi Udaya

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ಮತ್ತು ಸುದ್ದಿ ಉದಯ ವಾರಪತ್ರಿಕೆಯಿಂದ “ಸ್ವಾತಂತ್ರೋತ್ಸವ” ಆಚರಣೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಖ್ಯಾತ ಕ್ರಿಕೆಟಿಗ ಕೆ.ಎಲ್.ರಾಹುಲ್ ಭೇಟಿ

Suddi Udaya

ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ನಿಷೇಧ : ರಾಜ್ಯ ಸರ್ಕಾರ ಆದೇಶ

Suddi Udaya
error: Content is protected !!