30.1 C
ಪುತ್ತೂರು, ಬೆಳ್ತಂಗಡಿ
September 11, 2026
ಜಿಲ್ಲಾ ಸುದ್ದಿ

ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ ಉದ್ಘಾಟನೆ

  • ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 8,9 ಹಾಗೂ 10ನೇ ತರಗತಿಯ 600 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ

ಬೆಳ್ತಂಗಡಿ : ರೋಟರಿ ಇಂಟರಾಕ್ಟ್ ಜಿಲ್ಲೆ 3181 ನ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ – 2024ನ್ನು ನ.17ರಂದು ಉಜಿರೆಯ ಎಸ್.ಡಿ.ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಇಂಟರಾಕ್ಟ್ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ರೊ. ವಿಕ್ರಂದತ್ತ, ಜಿಲ್ಲಾ ಡಿಐಆರ್ ಲಿಖಿತ, ಡಿಸ್ಟ್ರಿಕ್ಟ್ ಗವನ೯ರ್ ಇಲೆಕ್ಟ್ ರಾಮಕೃಷ್ಣ, ಡಿಸ್ಟ್ರಿಕ್ಟ್ ಗವನ೯ರ್ ನಾಮಿನಿ ಸತೀಶ್ ಬೊಳಾರ್, ಡಿಸ್ಟ್ರಿಕ್ಟ್ ಕೌನ್ಸಿಲರ್ ದೇವದಾಸ್, ಕ್ಲಬ್ ನ ಎ.ಜಿ ಮಹಮ್ಮದ್ ವಳವೂರು ಮತ್ತು ಜಯರಾಮ, ಜಿಲ್ಲಾ ಕಾಯ೯ದಶಿ೯ ವಿತೇಶ್ ಬಾಳಿಗಾ, ಝೊನಲ್ ಲೆಫ್ಟಿನೆಂಟ್ ಮನೋರಮಾ, ಇಂಟರ್ ಚೇಯರ್ ಮೆನ್ ಡಾ.ಜಯಕುಮಾರ್ , ಬೆಳ್ತಂಗಡಿ ರೋಟರಿ ಕಾಯ೯ದಶಿ೯ ಸಂದೇಶ ರಾವ್ ಭಾಗವಹಿಸಿದ್ದರು.ರೋ. ಪೂರನ್ ವರ್ಮ ಅಧ್ಯಕ್ಷರು ರೋಟರಿ ಕ್ಲಬ್, ಬೆಳ್ತಂಗಡಿ ಸ್ವಾಗತಿಸಿದರು.
ರೋಟರಿಯ ಜಿಲ್ಲೆಯ ವಿವಿಧ ಪದಾಧಿಕಾರಿಗಳುಭಾಗವಹಿಸಿದ್ದಾರೆ.

ಯೂತ್ ಕಾರ್ನಿವಾಲ್ ಪ್ರಯುಕ್ತ ನ.16 ರ ಸಂಜೆ 5 ಗಂಟೆಯಿಂದ ವಿಷಯಾಧಾರಿತ ಸಾಂಸ್ಕೃತಿಕ ವೈವಿಧ್ಯ ಸ್ಪರ್ಧೆ ನಡೆಯಿತು .ಜೊತೆಗೆ ಹಾಡು, ರಸಪ್ರಶ್ನೆ, ಭಾಷಣ ಸ್ಪರ್ಧೆ, ಛದ್ಮವೇಷ ಹಾಗೂ ಪ್ರಬಂಧ ಬರಹ ಸ್ಪರ್ಧೆಗಳು ನಡೆಯಿತು.
ಇದರ ಜೊತೆಗೆ ವ್ಯಕ್ತಿತ್ವ ವಿಕಸನ ಶಿಬಿರಗಳು, ಇಂಟರಾಕ್ಟರ್-ಗಳ ಕೌಶಲ್ಯ ಪ್ರದರ್ಶಿಸುವ ವಸ್ತುಪ್ರದರ್ಶನ ಹಾಗೂ ವೈವಿಧ್ಯಮಯ ಆಹಾರದ ವ್ಯವಸ್ಥೆ. ಅಂತೆಯೇ ಯೂತ್ ಕಾರ್ನಿವಾಲ್ ಪುಯುಕ್ತ ಲಕ್ಕಿ ಗೇಮ್ಸ್, ಕರಾವಳಿಯ ಸಾಂಪ್ರದಾಯಿಕ ಆಟಗಳ ಸ್ಪರ್ಧೆ ಮೊದಲಾದ ಚಟುವಟಿಕೆಗಳನ್ನು ಕೂಡಾ ನಡೆಯಲಿದೆ.

ಬೆಳ್ತಂಗಡಿಯ ರೋಟರಿ ಕ್ಲಬ್ ಆಯೋಜಿಸಿರುವ ಈ ಯೂತ್ ಕಾರ್ನಿವಾಲ್-ನಲ್ಲಿ ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 8,9 ಹಾಗೂ 10ನೇ ತರಗತಿಯ ಸುಮಾರು 600 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

Related posts

ಬೆಳ್ತಂಗಡಿ ಮಾರಿಗುಡಿಯಲ್ಲಿ ಶಾಸಕ ಹರೀಶ್ ಪೂಂಜ ಪ್ರಮಾಣ: ನಾನು ಯಾರಿಂದಲೂ ಹಣವನ್ನು ಪಡೆದಿಲ್ಲ, ಭ್ರಷ್ಟಾಚಾರ ನಡೆಸಿಲ್ಲ: ದೀಪ ಬೆಳಗಿಸಿ, ಮಾರಿಗುಡಿ ಎದುರು ತೆಂಗಿನ ಕಾಯಿ ಒಡೆದು ಪ್ರಮಾಣ

Suddi Udaya

ಉಜಿರೆ: ಪ.ಪೂ ಕಾಲೇಜುಗಳ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಪ.ಪೂ ಕಾಲೇಜಿಗೆ ಚಾಂಪಿಯನ್ ಪ್ರಶಸ್ತಿ:

Suddi Udaya

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

Suddi Udaya

ತಣ್ಣೀರುಪಂತ : ಶಾಸಕ ಹರೀಶ್ ಪೂಂಜ ಹಾಗೂ ಹಿಂದೂ ನಾಯಕ ಅರುಣ್ ಕುಮಾರ್ ಪುತ್ತಿಲರಿಗೆ ಗೌರವಾರ್ಪಣೆ: ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನ, ಅಭಿಮಾನಿ ಬಳಗ ಹಾಗೂ ಊರಿನ ಸಮಸ್ತ ಬಂಧುಗಳ ವತಿಯಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಜೆಪಿ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಕರ್ತರ ಸಮಾವೇಶ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 3781 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!