28.3 C
ಪುತ್ತೂರು, ಬೆಳ್ತಂಗಡಿ
June 8, 2025
ಸಂಘ-ಸಂಸ್ಥೆಗಳು

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

ಪದ್ಮುಂಜ : ಮೂಲ್ಯ ಯಾನೆ ಕುಲಾಲ ಸೇವಾ ಸಂಘ ಕಣಿಯೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ವಿಶ್ವನಾಥ್ ಕುಲಾಲ್ ಮಲೆಂಗಲ್ಲು ಇವರ ಮನೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಉದಯ್ ಬಿ.ಕೆ ಬಂದಾರು ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನ ಪಡೆಯುವುದರ ಮೂಲಕ ಸಮಾಜ ಹಾಗೂ ದೇಶವನ್ನು ಕಟ್ಟುವ ಕೆಲಸವನ್ನು ಮಾಡಬೇಕು ಮತ್ತು ಅವರ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು.

ಕಣಿಯೂರು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದರಾದ ವಿಶ್ವನಾಥ್ ಮಲಿಂಗಲ್ಲು ಇವರ ಸಾಧನೆಯನ್ನ ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಸಂಘದ ಅಧ್ಯಕ್ಷರಾದ ಉಮೇಶ್ ಪಿಲಿಗೂಡು ವಹಿಸಿಕೊಂಡರು. ಅಶೋಕ್ ಬರಂಬು, ವಿಶ್ವನಾಥ್ ಮಲೆಂಗಲ್ಲು ಉಪಸ್ಥಿತರಿದ್ದರು. ಕುಮಾರಿ ಹರಿನಾಕ್ಷಿ ಸ್ವಾಗತಿಸಿದರು, ಕುಮಾರಿ ರಮ್ಯಾ ವಂದಿಸಿದರು, ಕುಮಾರಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರು: ಶ್ರೀಕೃಷ್ಣ ಭಜನಾ ಮಂಡಳಿಗೆ ಇನ್ವರ್ಟರ್ ಕೊಡುಗೆ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್, ರೋಟರಿ ಕ್ಲಬ್ ಬೆಂಗಳೂರು ಇಂದಿರಾನಗರ ಮತ್ತು ರೋಟರಿ ಸೇವಾ ಟ್ರಸ್ಟ್ ಸಹಯೋಗದೊಂದಿಗೆ ಆರ್ಥಿಕವಾಗಿ ಹಿಂದುಳಿದಿರುವ ತಾಲೂಕಿನ ಪ್ರತಿಭಾವಂತ 258 ವಿದ್ಯಾರ್ಥಿಗಳಿಗೆ ರೂ.10.32 ಲಕ್ಷ ಸ್ಕಾಲ‌ರ್ ಶಿಪ್ ವಿತರಣೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ಸದಸ್ಯರಿಗೆ ಶೇ.14 ಡಿವಿಡೆಂಟ್

Suddi Udaya

ಉಜಿರೆ: ಶ್ರೀ ದೇಶಿಕೇಂದ್ರ ಎಜುಕೇಶನ್ ಟ್ರಸ್ಟ್ ಇದರ ನೂತನ ಒಳ ಕ್ರೀಡಾಂಗಣ ಪ್ರಾರಂಭೋತ್ಸವ ಮಕ್ಕಳ ಭವಿಷ್ಯಕ್ಕೆ ಆಧುನಿಕ ಶಿಕ್ಷಣ ಅಗತ್ಯ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!