23.5 C
ಪುತ್ತೂರು, ಬೆಳ್ತಂಗಡಿ
March 7, 2026
ಸಂಘ-ಸಂಸ್ಥೆಗಳು

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

ಪದ್ಮುಂಜ : ಮೂಲ್ಯ ಯಾನೆ ಕುಲಾಲ ಸೇವಾ ಸಂಘ ಕಣಿಯೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ವಿಶ್ವನಾಥ್ ಕುಲಾಲ್ ಮಲೆಂಗಲ್ಲು ಇವರ ಮನೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಉದಯ್ ಬಿ.ಕೆ ಬಂದಾರು ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನ ಪಡೆಯುವುದರ ಮೂಲಕ ಸಮಾಜ ಹಾಗೂ ದೇಶವನ್ನು ಕಟ್ಟುವ ಕೆಲಸವನ್ನು ಮಾಡಬೇಕು ಮತ್ತು ಅವರ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು.

ಕಣಿಯೂರು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದರಾದ ವಿಶ್ವನಾಥ್ ಮಲಿಂಗಲ್ಲು ಇವರ ಸಾಧನೆಯನ್ನ ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಸಂಘದ ಅಧ್ಯಕ್ಷರಾದ ಉಮೇಶ್ ಪಿಲಿಗೂಡು ವಹಿಸಿಕೊಂಡರು. ಅಶೋಕ್ ಬರಂಬು, ವಿಶ್ವನಾಥ್ ಮಲೆಂಗಲ್ಲು ಉಪಸ್ಥಿತರಿದ್ದರು. ಕುಮಾರಿ ಹರಿನಾಕ್ಷಿ ಸ್ವಾಗತಿಸಿದರು, ಕುಮಾರಿ ರಮ್ಯಾ ವಂದಿಸಿದರು, ಕುಮಾರಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ನಿಡ್ಲೆ ಸ.ಹಿ.ಪ್ರಾ. ಶಾಲೆಯ ಕಟ್ಟಡ ದುರಸ್ಥಿ ಕಾರ್ಯಕ್ಕೆ ಶ್ರೀ ಕ್ಷೇ. ಧ.ಗ್ರಾ.ಯೋ. ವತಿಯಿಂದ ರೂ. 1ಲಕ್ಷ ಮಂಜೂರು

Suddi Udaya

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಓಣಂ ಆಚರಣೆ

Suddi Udaya
error: Content is protected !!