September 6, 2026
ಸಂಘ-ಸಂಸ್ಥೆಗಳು

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

ಪದ್ಮುಂಜ : ಮೂಲ್ಯ ಯಾನೆ ಕುಲಾಲ ಸೇವಾ ಸಂಘ ಕಣಿಯೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ವಿಶ್ವನಾಥ್ ಕುಲಾಲ್ ಮಲೆಂಗಲ್ಲು ಇವರ ಮನೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಉದಯ್ ಬಿ.ಕೆ ಬಂದಾರು ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನ ಪಡೆಯುವುದರ ಮೂಲಕ ಸಮಾಜ ಹಾಗೂ ದೇಶವನ್ನು ಕಟ್ಟುವ ಕೆಲಸವನ್ನು ಮಾಡಬೇಕು ಮತ್ತು ಅವರ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು.

ಕಣಿಯೂರು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದರಾದ ವಿಶ್ವನಾಥ್ ಮಲಿಂಗಲ್ಲು ಇವರ ಸಾಧನೆಯನ್ನ ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಸಂಘದ ಅಧ್ಯಕ್ಷರಾದ ಉಮೇಶ್ ಪಿಲಿಗೂಡು ವಹಿಸಿಕೊಂಡರು. ಅಶೋಕ್ ಬರಂಬು, ವಿಶ್ವನಾಥ್ ಮಲೆಂಗಲ್ಲು ಉಪಸ್ಥಿತರಿದ್ದರು. ಕುಮಾರಿ ಹರಿನಾಕ್ಷಿ ಸ್ವಾಗತಿಸಿದರು, ಕುಮಾರಿ ರಮ್ಯಾ ವಂದಿಸಿದರು, ಕುಮಾರಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಮಂಜ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಚಿಣ್ಣರ ಉತ್ಸವ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಬಾರ್ಯ: ಆದಿಶಕ್ತಿ ಗೆಳೆಯರ ಬಳಗ ಕುಂಟಾಲಕಟ್ಟೆ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂಡಾಜೆ ಇದರ ಆಶ್ರಯದಲ್ಲಿ70ನೇ ವರ್ಷದ ಅಖಿಲ ಭಾರತ ಸಹಕಾರ ಸಪ್ತಾಹ- ಸಮಾರೋಪ

Suddi Udaya

ಬಂದಾರು ಗ್ರಾಮದ ಮೈರೋಳ್ತಡ್ಕ ಶಿವ ಗೆಳೆಯರ ಬಳಗ (ರಿ.)ನವ್ಯಶ್ರೀ ಯುವತಿ ಮಂಡಲ (ರಿ.) ಇದರ ಆಶ್ರಯದಲ್ಲಿ 29 ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ

Suddi Udaya
error: Content is protected !!