July 23, 2026
ಸಂಘ-ಸಂಸ್ಥೆಗಳು

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

ಪದ್ಮುಂಜ : ಮೂಲ್ಯ ಯಾನೆ ಕುಲಾಲ ಸೇವಾ ಸಂಘ ಕಣಿಯೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ವಿಶ್ವನಾಥ್ ಕುಲಾಲ್ ಮಲೆಂಗಲ್ಲು ಇವರ ಮನೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಉದಯ್ ಬಿ.ಕೆ ಬಂದಾರು ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನ ಪಡೆಯುವುದರ ಮೂಲಕ ಸಮಾಜ ಹಾಗೂ ದೇಶವನ್ನು ಕಟ್ಟುವ ಕೆಲಸವನ್ನು ಮಾಡಬೇಕು ಮತ್ತು ಅವರ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು.

ಕಣಿಯೂರು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದರಾದ ವಿಶ್ವನಾಥ್ ಮಲಿಂಗಲ್ಲು ಇವರ ಸಾಧನೆಯನ್ನ ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಸಂಘದ ಅಧ್ಯಕ್ಷರಾದ ಉಮೇಶ್ ಪಿಲಿಗೂಡು ವಹಿಸಿಕೊಂಡರು. ಅಶೋಕ್ ಬರಂಬು, ವಿಶ್ವನಾಥ್ ಮಲೆಂಗಲ್ಲು ಉಪಸ್ಥಿತರಿದ್ದರು. ಕುಮಾರಿ ಹರಿನಾಕ್ಷಿ ಸ್ವಾಗತಿಸಿದರು, ಕುಮಾರಿ ರಮ್ಯಾ ವಂದಿಸಿದರು, ಕುಮಾರಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಯಕ್ಷಧ್ರುವ-ಯಕ್ಷಶಿಕ್ಷಣ ತರಗತಿಗೆ ಚಾಲನೆ

Suddi Udaya

ಏ.23-24: ಇಚ್ಚಿಲದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಪೀಠ ಪ್ರತಿಷ್ಠೆ-ಗುರುಮಂದಿರ ಲೋಕಾರ್ಪಣೆ

Suddi Udaya

ಉಜಿರೆಯಲ್ಲಿ 5ನೇ ವರ್ಷದ ಕೇರಳ ಸಾಂಪ್ರದಾಯಿಕ “ವಿಷುಕಣಿ” ಆಚರಣೆ

Suddi Udaya

ಬೆಳ್ತಂಗಡಿ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!