July 24, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ2023-2024 ನೇ ಸಾಲಿನ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ ) ಉಜಿರೆ ಇದರ 2023-2024 ನೇ ಸಾಲಿನ ವಾರ್ಷಿಕ ಮಹಾಸಭೆ ನ. 17 ರಂದು ಉಜಿರೆ ಎಸ್. ಪಿ ಆಯಿಲು ಮಿಲ್ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಶ್ರೀಮತಿ ಮಮತಾ ಶಿವರಾಮ ಗೌಡ ಮತ್ತು ಶ್ರೀಮತಿ ಭವ್ಯ ಸುರೇಂದ್ರ ಹುಂಕ್ರೋಟ್ಟು ಇವರು ಪ್ರಾರ್ಥನೆ ನೆರವೇರಿಸಿದರು. ಭರತ್ ಕುಮಾರ್ ಗೌಡ ಹಾನಿಬೆಟ್ಟು ಇವರು ವೇದಿಕೆಯಲ್ಲಿದ್ದ ಅಥಿತಿಗಳನ್ನು ಸ್ವಾಗತಿಸಿದರು. ಈ ಸಂಧರ್ಭದಲ್ಲಿ ವೇದಿಕೆಯಲ್ಲಿ ಕಾ ಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ ಇವರು ಉಪಸ್ಥಿತರಿದ್ದರು.ಇತ್ತೀಚಿಗೆ ನಮ್ಮನಗಲಿದ ಸಂಘದ ಸದಸ್ಯರಾದ ದಿವಂಗತ ಸುಂದರ ಗೌಡ ಇಚ್ಚಿಲ ಮತ್ತು ಇಂದಿರಾ ಎಸ್ ಗೌಡ ಮಾಳಿಗೆಮನೆ ಇವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶ್ರೀ ಸುರೇಶ್ ಗೌಡ ಕೂಡಿಗೆ ಅವರ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರು ಸಂಘದ ಅಭಿವೃದ್ಧಿಗೆ ತ್ಯಾಗ ಧನಸಹಾಯ ಬಹಳ ಮುಖ್ಯವಾಗಿರುತ್ತದೆ ಎಂದು ಸಂಘದ ಅಭಿವೃದ್ಧಿಗೆ ಜನರ ಸಹಕಾರವನ್ನು ಕೇಳಿಕೊಂಡರು.ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷರಾದ ಅನಿಲ್ ಗೌಡ ಅಂತರ ಮತ್ತು ಸಹಕಾರಿಯ ಮುಖ್ಯಕಾರ್ಯನಿರ್ವಾಹಣಾ ಧಿಕಾರಿಯಾದ ದಿನೇಶ್ ಗೌಡ ಕಲ್ಲಾ ಜೆ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿಯಾದ ಬಾಲಕೃಷ್ಣ ಗೌಡ ಕಲ್ಲಾಜೆ ಇವರು ವಾರ್ಷಿಕ ವರದಿಯನ್ನು ವಾಚಿಸಿದರು. ಸಂಘದ ಕೋಶಾಧಿಕಾರಿಯಾದ ರಾಘವೇಂದ್ರ ಗೌಡ ಪೊದುoಬಿಲ ಲೆಕ್ಕ ಪತ್ರ ಮಂಡನೆ ಮಾಡಿದರು. ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶಿವಕಾಂತ ಗೌಡ ಧನ್ಯವಾದವಿತ್ತರು. ಕಾರ್ಯಕ್ರಮ ನಿರೂಪಣೆಯನ್ನು ಯುವ ವೇದಿಕೆ ಕಾರ್ಯದರ್ಶಿಯಾದ ಪ್ರಕಾಶ್ ಗೌಡ ಕೆದ್ಲ ಮತ್ತು ಶ್ರೀಮತಿ ಗೀತಾ ಚಿದಾನಂದ ಗೌಡ ಬಡೆಕೊಟ್ಟು ಮಾಡಿದರು.

Related posts

ಮಡಂತ್ಯಾರು ಸಿಎ ಬ್ಯಾಂಕ್ ನೇತೃತ್ವದಲ್ಲಿ ದ.ಕ. ಜಿಲ್ಲಾ ಮಟ್ಟದ 72ನೇ ಸಹಕಾರ ಸಪ್ತಾಹಕ್ಕೆ ಚಾಲನೆ: ಮಡಂತ್ಯಾರು ನಗರದಲ್ಲಿ ಆದ್ದೂರಿಯ ಮೆರವಣಿಗೆ, ಸಾಧಕ 72 ಮಂದಿಗೆ ಕೃಷಿ ಸಿಂಧೂರ ಪ್ರಶಸ್ತಿ ಹಾಗೂ 86ಮಂದಿ ಸಾಧಕರಿಗೆ ಕ್ಷೀರ ರತ್ನ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಪಡ್ಡಂದಡ್ಕ: ಎಸ್ ಕೆ ಎಸ್ ಎಸ್ ಫ್ ವತಿಯಿಂದ ಉಚಿತ ಮನೆ ಹಸ್ತಾಂತರ

Suddi Udaya

ಶ್ರೀರಾಮ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ:ಸೊಸೈಟಿಯಲ್ಲಿ ಎರಡು ದಿನದ ಸಿಐಡಿ ಶೋಧ ಅಂತ್ಯ

Suddi Udaya

ಶಿಬಾಜೆ ಶ್ರೀ ರಾಜರಾಜೇಶ್ವರಿ ಭಜನಾ ಮಂದಿರ ಭಜನೋತ್ಸವ: ಶೌರ್ಯ ವಿಪತ್ತು ತಂಡದಿಂದ ಶ್ರಮದಾನ

Suddi Udaya
error: Content is protected !!