April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

ಮುಂಡಾಜೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದೊಂದಿಗೆ ಮುಂಡಾಜೆ ಶಾರದ ನಗರ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಇದರ ಉದ್ಘಾಟನಾ ಕಾರ್ಯಕ್ರಮವು ನ. 17ರಂದು ಶ್ರೀ ದುರ್ಗಾಪರಮೇಶ್ವರೀ ಆರಾಧನಾ ಮಂದಿರದ ವಠಾರದಲ್ಲಿ ನಡೆಯಿತು.

ಅನಂತ್ ಭಟ್ ಮಚ್ಚಿಮಲೆ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ನಮ್ಮ ಪುರಾಣವನ್ನು ಮುಂದಿನ ಪೀಳಿಗೆಗೆ, ನವರಸ ಭರಿತ ರೂಪಕದ ಮೂಲಕ ತಿಳಿಸುವಂತಹದ್ದು ಯಕ್ಷಗಾನ ಕಲೆ. ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉನ್ನತವಾಗಿ ಬೆಳಗಲಿ, ನಮ್ಮೆಲ್ಲರ ಸಹಕಾರ ಸದಾ ಇರುತ್ತದೆ ಎಂದು ಶುಭಹಾರೈಸಿದರು.

ಯಕ್ಷಗುರು ರವಿಕುಮಾರ್ ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿ, ಯಕ್ಷಗಾನದಲ್ಲಿ ನಾವು ಮಾತ್ರ ಕಾಣಿಸಿಕೊಳ್ಳುವುದಲ್ಲ, ನಮ್ಮ ಊರು ಕಾಣಿಸಿಕೊಳ್ಳಬೇಕು, ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಯಕ್ಷಗಾನ ಅಧ್ಯಯನ ಕೇಂದ್ರ ಪ್ರಾರಂಭ ಮಾಡಿರುವಂತಹದ್ದು. ನಾವು ಕಷ್ಟಪಟ್ಟು ಕಲಿತಂತಹ ವಿದ್ಯೆಯನ್ನು ಇನ್ನೊಬ್ಬನಿಗೆ ಧಾರೆ ಎರೆದು ಕೊಟ್ಟರೆ ಗುರು ಋಣದಿಂದ ಮುಕ್ತಿ ಹೊಂದಲು ಸಾಧ್ಯ ಎಂದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಅಧ್ಯಕ್ಷತೆಯನ್ನು ವಹಿಸಿದ್ದರು.

ಅತಿಥಿಗಳಾಗಿ ಯಕ್ಷಗಾನ ಅಕಾಡೆಮಿ ಸದಸ್ಯರಾದ ದಯಾನಂದ ಪಿ. ಬೆಳಾಲು, ರಾಘವ ಹೆಚ್. ಗೇರುಕಟ್ಟೆ, ಯಕ್ಷಗಾನ ಗುರುಗಳು ದಿವಾಣ ಶಿವಶಂಕರ್ ಭಟ್, ಕಟೀಲು ಮೇಳದ ಯಕ್ಷಗಾನ ಕಲಾವಿದ ರಾಮಣ್ಣ ಭಂಡಾರಿ, ಮುಂಡಾಜೆ ಕಲಾಕುಂಚ ಕಲಾವಿದ ಜಯರಾಮ ಕೆ., ಕೀರ್ತನಾ ಕಲಾತಂಡ ಸಂಚಾಲಕ ಸದಾನಂದ ಬಿ., ಸಿವಿಲ್ ಗುತ್ತಿಗೆದಾರರು ಚೆನ್ನಕೇಶವ ನಾಯ್ಕ ಅರಸಮಜಲು, ಶ್ರೀ ಮಂಜುಶ್ರೀ ಭಜನಾ ಮಂಡಳಿ ಕಾರ್ಯದರ್ಶಿ ಉಮೇಶ ಆಚಾರ್ಯ, ಜನಪದ ಕಲಾವಿದೆ ಶ್ರೀಮತಿ ರವಿ ರಂಜಿನಿ ಉಪಸ್ಥಿತರಿದ್ದರು.

ಕಲಾವಿದರಾದ ಜಯರಾಮ್ ಕೆ. ನಿರೂಪಿಸಿದರು.

Related posts

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಉಜಿರೆಯಿಂದ ಧರ್ಮಸ್ಥಳಕ್ಕೆ ವೈಭವದ ಪಾದಯಾತ್ರೆ: ಬೃಹತ್ ಸಂಖ್ಯೆಯಲ್ಲಿ ಭಾಗವಹಿಸಿದ ಭಕ್ತರು : ಭಜನಾ ತಂಡಗಳಿಂದ ಕುಣಿತ ಭಜನೆ

Suddi Udaya

ಕೊಟ್ಟಿಗೆಹಾರ: ದೇವರ ಮನೆ ಪ್ರವಾಸಕ್ಕೆ ಹೋದ ಬೆಳ್ತಂಗಡಿಯ ಯುವಕ ನಾಪತ್ತೆ ಪ್ರಕರಣ: ಕೊಯ್ಯೂರು ಪರಿಸರದಲ್ಲಿ ಪತ್ತೆಯಾದ ಯುವಕ ದೀಕ್ಷಿತ್ ಪೂಜಾರಿ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಇಸ್ಮಾಯಿಲ್ ಐ.ಬಿ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ