ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

ಮುಂಡಾಜೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದೊಂದಿಗೆ ಮುಂಡಾಜೆ ಶಾರದ ನಗರ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಇದರ ಉದ್ಘಾಟನಾ ಕಾರ್ಯಕ್ರಮವು ನ. 17ರಂದು ಶ್ರೀ ದುರ್ಗಾಪರಮೇಶ್ವರೀ ಆರಾಧನಾ ಮಂದಿರದ ವಠಾರದಲ್ಲಿ ನಡೆಯಿತು.

ಅನಂತ್ ಭಟ್ ಮಚ್ಚಿಮಲೆ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ನಮ್ಮ ಪುರಾಣವನ್ನು ಮುಂದಿನ ಪೀಳಿಗೆಗೆ, ನವರಸ ಭರಿತ ರೂಪಕದ ಮೂಲಕ ತಿಳಿಸುವಂತಹದ್ದು ಯಕ್ಷಗಾನ ಕಲೆ. ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉನ್ನತವಾಗಿ ಬೆಳಗಲಿ, ನಮ್ಮೆಲ್ಲರ ಸಹಕಾರ ಸದಾ ಇರುತ್ತದೆ ಎಂದು ಶುಭಹಾರೈಸಿದರು.

ಯಕ್ಷಗುರು ರವಿಕುಮಾರ್ ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿ, ಯಕ್ಷಗಾನದಲ್ಲಿ ನಾವು ಮಾತ್ರ ಕಾಣಿಸಿಕೊಳ್ಳುವುದಲ್ಲ, ನಮ್ಮ ಊರು ಕಾಣಿಸಿಕೊಳ್ಳಬೇಕು, ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಯಕ್ಷಗಾನ ಅಧ್ಯಯನ ಕೇಂದ್ರ ಪ್ರಾರಂಭ ಮಾಡಿರುವಂತಹದ್ದು. ನಾವು ಕಷ್ಟಪಟ್ಟು ಕಲಿತಂತಹ ವಿದ್ಯೆಯನ್ನು ಇನ್ನೊಬ್ಬನಿಗೆ ಧಾರೆ ಎರೆದು ಕೊಟ್ಟರೆ ಗುರು ಋಣದಿಂದ ಮುಕ್ತಿ ಹೊಂದಲು ಸಾಧ್ಯ ಎಂದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಅಧ್ಯಕ್ಷತೆಯನ್ನು ವಹಿಸಿದ್ದರು.

ಅತಿಥಿಗಳಾಗಿ ಯಕ್ಷಗಾನ ಅಕಾಡೆಮಿ ಸದಸ್ಯರಾದ ದಯಾನಂದ ಪಿ. ಬೆಳಾಲು, ರಾಘವ ಹೆಚ್. ಗೇರುಕಟ್ಟೆ, ಯಕ್ಷಗಾನ ಗುರುಗಳು ದಿವಾಣ ಶಿವಶಂಕರ್ ಭಟ್, ಕಟೀಲು ಮೇಳದ ಯಕ್ಷಗಾನ ಕಲಾವಿದ ರಾಮಣ್ಣ ಭಂಡಾರಿ, ಮುಂಡಾಜೆ ಕಲಾಕುಂಚ ಕಲಾವಿದ ಜಯರಾಮ ಕೆ., ಕೀರ್ತನಾ ಕಲಾತಂಡ ಸಂಚಾಲಕ ಸದಾನಂದ ಬಿ., ಸಿವಿಲ್ ಗುತ್ತಿಗೆದಾರರು ಚೆನ್ನಕೇಶವ ನಾಯ್ಕ ಅರಸಮಜಲು, ಶ್ರೀ ಮಂಜುಶ್ರೀ ಭಜನಾ ಮಂಡಳಿ ಕಾರ್ಯದರ್ಶಿ ಉಮೇಶ ಆಚಾರ್ಯ, ಜನಪದ ಕಲಾವಿದೆ ಶ್ರೀಮತಿ ರವಿ ರಂಜಿನಿ ಉಪಸ್ಥಿತರಿದ್ದರು.

ಕಲಾವಿದರಾದ ಜಯರಾಮ್ ಕೆ. ನಿರೂಪಿಸಿದರು.

Related posts

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ : ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಭೇಟಿ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾರ್ ವಿಧಿವಶ

Suddi Udaya

ಬೆಳ್ತಂಗಡಿ ಆಭರಣ ಜ್ಯುವೆಲ್ಲರ್ಸ್ ಗೆ ಐಟಿ ದಾಳಿ

Suddi Udaya

ವಿದ್ಯಾರ್ಥಿ ಕೀರ್ತನ್ ಕೈಚಳಕದಿಂದ ಸಾಸಿವೆಯಲ್ಲಿ ಮೂಡಿದ`ಭಗತ್ ಸಿಂಗ್’ ಚಿತ್ರ :ಇಂಡಿಯಾ ಬುಕ್ ಆಫ್ ರೆಕಾರ್ಡ್ಗೆ ಸೇರ್ಪಡೆ

Suddi Udaya
error: Content is protected !!