23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

ಉಜಿರೆ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-2024 ನೇ ಸಾಲಿನ ವಾರ್ಷಿಕ ಮಹಾಸಭೆ ನ. 17ರಂದು ಉಜಿರೆ ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ವೇದಿಕೆಯಲ್ಲಿ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ ಇವರು ಉಪಸ್ಥಿತರಿದ್ದರು.

ಇತ್ತೀಚಿಗೆ ಅಗಲಿದ ಸಂಘದ ಸದಸ್ಯರಾದ ದಿ.ಸುಂದರ ಗೌಡ ಇಚ್ಚಿಲ ಮತ್ತು ಇಂದಿರಾ ಎಸ್.ಗೌಡ ಮಾಳಿಗೆಮನೆ ಇವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸುರೇಶ್ ಗೌಡ ಕೂಡಿಗೆ ಅವರ ಬಗ್ಗೆ ಮಾತನಾಡಿದರು.

ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಸಂಘದ ಅಭಿವೃದ್ಧಿಗೆ ತ್ಯಾಗ ಧನಸಹಾಯ ಬಹಳ ಮುಖ್ಯವಾಗಿರುತ್ತದೆ ಎಂದರು.

ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷರಾದ ಅನಿಲ್ ಗೌಡ ಅಂತರ, ಕಾಲಬೈರವೇಶ್ವರ ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಣಾ ಧಿಕಾರಿ ದಿನೇಶ್ ಗೌಡ ಕಲ್ಲಾಜೆ ಉಪಸ್ಥಿತರಿದ್ದರು.

ಮಮತಾ ಶಿವರಾಮ ಗೌಡ ಮತ್ತು ಶ್ರೀಮತಿ ಭವ್ಯ ಸುರೇಂದ್ರ ಹುಂಕ್ರೋಟ್ಟು ಪ್ರಾರ್ಥನೆ ನೆರವೇರಿಸಿದರು. ಭರತ್ ಕುಮಾರ್ ಗೌಡ ಹಾನಿಬೆಟ್ಟು ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ವಾರ್ಷಿಕ ವರದಿ ವಾಚಿಸಿದರು. ಸಂಘದ ಕೋಶಾಧಿಕಾರಿ ರಾಘವೇಂದ್ರ ಗೌಡ ಪೊದುoಬಿಲ ಲೆಕ್ಕ ಪತ್ರ ಮಂಡಿಸಿದರು.‌ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ ಧನ್ಯವಾದವಿತ್ತರು. ಯುವ ವೇದಿಕೆ ಕಾರ್ಯದರ್ಶಿಯಾದ ಪ್ರಕಾಶ್ ಗೌಡ ಕೆದ್ಲ ಮತ್ತು ಗೀತಾ ಚಿದಾನಂದ ಗೌಡ ಬಡೆಕೊಟ್ಟು ನಿರೂಪಿಸಿದರು.

Related posts

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣ : 10 ತಿಂಗಳು ಕಳೆದರೂ ಕಾರ್ಮಿಕರಿಗೆ ಸಿಗದ ಕೂಲಿ, ಬಾಡಿಗೆ

Suddi Udaya

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ ಮುಗೇರ ಹಿತಚಿಂತನ ವೇದಿಕೆಯ ವತಿಯಿಂದ ಧನಸಹಾಯ ಹಸ್ತಾಂತರ

Suddi Udaya

ಉರುವಾಲು: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ – ಧಾರ್ಮಿಕ ಸಭೆ

Suddi Udaya

ಕಣಿಯೂರು ವಲಯದ ಪದ್ಮುಂಜ ಕಾರ್ಯಕ್ಷೇತ್ರದಲ್ಲಿ ಶ್ರೀ ಗೌರಿ ಜ್ಞಾನ ವಿಕಾಸ ಕೇಂದ್ರದಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya
error: Content is protected !!