September 6, 2026
ಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ2023-2024 ನೇ ಸಾಲಿನ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ ) ಉಜಿರೆ ಇದರ 2023-2024 ನೇ ಸಾಲಿನ ವಾರ್ಷಿಕ ಮಹಾಸಭೆ ನ. 17 ರಂದು ಉಜಿರೆ ಎಸ್. ಪಿ ಆಯಿಲು ಮಿಲ್ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರ ಅಧ್ಯಕ್ಷತೆಯಲ್ಲಿ ಜರುಗಿತು.
ಶ್ರೀಮತಿ ಮಮತಾ ಶಿವರಾಮ ಗೌಡ ಮತ್ತು ಶ್ರೀಮತಿ ಭವ್ಯ ಸುರೇಂದ್ರ ಹುಂಕ್ರೋಟ್ಟು ಇವರು ಪ್ರಾರ್ಥನೆ ನೆರವೇರಿಸಿದರು. ಭರತ್ ಕುಮಾರ್ ಗೌಡ ಹಾನಿಬೆಟ್ಟು ಇವರು ವೇದಿಕೆಯಲ್ಲಿದ್ದ ಅಥಿತಿಗಳನ್ನು ಸ್ವಾಗತಿಸಿದರು. ಈ ಸಂಧರ್ಭದಲ್ಲಿ ವೇದಿಕೆಯಲ್ಲಿ ಕಾ ಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ ಇವರು ಉಪಸ್ಥಿತರಿದ್ದರು.ಇತ್ತೀಚಿಗೆ ನಮ್ಮನಗಲಿದ ಸಂಘದ ಸದಸ್ಯರಾದ ದಿವಂಗತ ಸುಂದರ ಗೌಡ ಇಚ್ಚಿಲ ಮತ್ತು ಇಂದಿರಾ ಎಸ್ ಗೌಡ ಮಾಳಿಗೆಮನೆ ಇವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಶ್ರೀ ಸುರೇಶ್ ಗೌಡ ಕೂಡಿಗೆ ಅವರ ಬಗ್ಗೆ ಮಾತನಾಡಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರು ಸಂಘದ ಅಭಿವೃದ್ಧಿಗೆ ತ್ಯಾಗ ಧನಸಹಾಯ ಬಹಳ ಮುಖ್ಯವಾಗಿರುತ್ತದೆ ಎಂದು ಸಂಘದ ಅಭಿವೃದ್ಧಿಗೆ ಜನರ ಸಹಕಾರವನ್ನು ಕೇಳಿಕೊಂಡರು.ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷರಾದ ಅನಿಲ್ ಗೌಡ ಅಂತರ ಮತ್ತು ಸಹಕಾರಿಯ ಮುಖ್ಯಕಾರ್ಯನಿರ್ವಾಹಣಾ ಧಿಕಾರಿಯಾದ ದಿನೇಶ್ ಗೌಡ ಕಲ್ಲಾ ಜೆ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿಯಾದ ಬಾಲಕೃಷ್ಣ ಗೌಡ ಕಲ್ಲಾಜೆ ಇವರು ವಾರ್ಷಿಕ ವರದಿಯನ್ನು ವಾಚಿಸಿದರು. ಸಂಘದ ಕೋಶಾಧಿಕಾರಿಯಾದ ರಾಘವೇಂದ್ರ ಗೌಡ ಪೊದುoಬಿಲ ಲೆಕ್ಕ ಪತ್ರ ಮಂಡನೆ ಮಾಡಿದರು. ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ ಅಧ್ಯಕ್ಷರಾದ ಶ್ರೀಮತಿ ಅಪರ್ಣ ಶಿವಕಾಂತ ಗೌಡ ಧನ್ಯವಾದವಿತ್ತರು. ಕಾರ್ಯಕ್ರಮ ನಿರೂಪಣೆಯನ್ನು ಯುವ ವೇದಿಕೆ ಕಾರ್ಯದರ್ಶಿಯಾದ ಪ್ರಕಾಶ್ ಗೌಡ ಕೆದ್ಲ ಮತ್ತು ಶ್ರೀಮತಿ ಗೀತಾ ಚಿದಾನಂದ ಗೌಡ ಬಡೆಕೊಟ್ಟು ಮಾಡಿದರು.

Related posts

ಬೆಸ್ಟ್ ಎಂಎಲ್‌ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್‌ ಪೂಂಜರಿಗೆ ತಾಲೂಕು ಒಕ್ಕಲಿಗ ಸಮುದಾಯದಿಂದ ಗೌರವಾರ್ಪಣೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳಾಲು: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಕಡಿರುದ್ಯಾವರ ಉತ್ಸಾಹಿ ಗೆಳೆಯರ ಬಳಗ ಆಶ್ರಯದಲ್ಲಿ ವಾಲಿಬಾಲ್ ಪಂದ್ಯಾಟ, ಉತ್ಸಾಹಿ ಟ್ರೋಫಿ-2026-ವಾಲಿಬಾಲ್ ಕ್ರೀಡಾಂಗಣದ ಹೈಮಾಸ್ಟ್ ಲೈಟಿಂಗ್ ಉದ್ಘಾಟನೆ

Suddi Udaya

ಬೆಳ್ತಂಗಡಿ ತಣ್ಣೀರ್ ಪಂತ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನ ಪ್ರಶಸ್ತಿ

Suddi Udaya

ಪಡಂಗಡಿ ಸೊಸೈಟಿಯ ಎಸ್ ಮಾರ್ಟ್, ಭದ್ರತಾ ಕೊಠಡಿ ಉದ್ಘಾಟನೆ

Suddi Udaya
error: Content is protected !!