24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

ಮುಂಡಾಜೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದೊಂದಿಗೆ ಮುಂಡಾಜೆ ಶಾರದ ನಗರ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಇದರ ಉದ್ಘಾಟನಾ ಕಾರ್ಯಕ್ರಮವು ನ. 17ರಂದು ಶ್ರೀ ದುರ್ಗಾಪರಮೇಶ್ವರೀ ಆರಾಧನಾ ಮಂದಿರದ ವಠಾರದಲ್ಲಿ ನಡೆಯಿತು.

ಅನಂತ್ ಭಟ್ ಮಚ್ಚಿಮಲೆ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ನಮ್ಮ ಪುರಾಣವನ್ನು ಮುಂದಿನ ಪೀಳಿಗೆಗೆ, ನವರಸ ಭರಿತ ರೂಪಕದ ಮೂಲಕ ತಿಳಿಸುವಂತಹದ್ದು ಯಕ್ಷಗಾನ ಕಲೆ. ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉನ್ನತವಾಗಿ ಬೆಳಗಲಿ, ನಮ್ಮೆಲ್ಲರ ಸಹಕಾರ ಸದಾ ಇರುತ್ತದೆ ಎಂದು ಶುಭಹಾರೈಸಿದರು.

ಯಕ್ಷಗುರು ರವಿಕುಮಾರ್ ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿ, ಯಕ್ಷಗಾನದಲ್ಲಿ ನಾವು ಮಾತ್ರ ಕಾಣಿಸಿಕೊಳ್ಳುವುದಲ್ಲ, ನಮ್ಮ ಊರು ಕಾಣಿಸಿಕೊಳ್ಳಬೇಕು, ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಯಕ್ಷಗಾನ ಅಧ್ಯಯನ ಕೇಂದ್ರ ಪ್ರಾರಂಭ ಮಾಡಿರುವಂತಹದ್ದು. ನಾವು ಕಷ್ಟಪಟ್ಟು ಕಲಿತಂತಹ ವಿದ್ಯೆಯನ್ನು ಇನ್ನೊಬ್ಬನಿಗೆ ಧಾರೆ ಎರೆದು ಕೊಟ್ಟರೆ ಗುರು ಋಣದಿಂದ ಮುಕ್ತಿ ಹೊಂದಲು ಸಾಧ್ಯ ಎಂದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಅಧ್ಯಕ್ಷತೆಯನ್ನು ವಹಿಸಿದ್ದರು.

ಅತಿಥಿಗಳಾಗಿ ಯಕ್ಷಗಾನ ಅಕಾಡೆಮಿ ಸದಸ್ಯರಾದ ದಯಾನಂದ ಪಿ. ಬೆಳಾಲು, ರಾಘವ ಹೆಚ್. ಗೇರುಕಟ್ಟೆ, ಯಕ್ಷಗಾನ ಗುರುಗಳು ದಿವಾಣ ಶಿವಶಂಕರ್ ಭಟ್, ಕಟೀಲು ಮೇಳದ ಯಕ್ಷಗಾನ ಕಲಾವಿದ ರಾಮಣ್ಣ ಭಂಡಾರಿ, ಮುಂಡಾಜೆ ಕಲಾಕುಂಚ ಕಲಾವಿದ ಜಯರಾಮ ಕೆ., ಕೀರ್ತನಾ ಕಲಾತಂಡ ಸಂಚಾಲಕ ಸದಾನಂದ ಬಿ., ಸಿವಿಲ್ ಗುತ್ತಿಗೆದಾರರು ಚೆನ್ನಕೇಶವ ನಾಯ್ಕ ಅರಸಮಜಲು, ಶ್ರೀ ಮಂಜುಶ್ರೀ ಭಜನಾ ಮಂಡಳಿ ಕಾರ್ಯದರ್ಶಿ ಉಮೇಶ ಆಚಾರ್ಯ, ಜನಪದ ಕಲಾವಿದೆ ಶ್ರೀಮತಿ ರವಿ ರಂಜಿನಿ ಉಪಸ್ಥಿತರಿದ್ದರು.

ಕಲಾವಿದರಾದ ಜಯರಾಮ್ ಕೆ. ನಿರೂಪಿಸಿದರು.

Related posts

ಬೆಳ್ತಂಗಡಿ ನಡಿಗುತ್ತು ನಿವಾಸಿ ಶ್ರೀಮತಿ ಪುಷ್ಪಾವತಿ ನಿಧನ

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ: ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ನಾರಾವಿ ಸಿಎ ಬ್ಯಾಂಕಿನ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಬೆಂಬಲ

Suddi Udaya

ಸೌಜನ್ಯ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪರಿಶೀಲನೆ ನಡೆಸಿದ ಹೈಕೋರ್ಟ್: ಸರಕಾರ, ಮೂಲದೂರುದಾರರು ಅಥವಾ ಸಂತ್ರಸ್ತ ಕುಟುಂಬ ಮೇಲ್ಮನವಿ ಸಲ್ಲಿಸಲು ಅವಕಾಶ ಇದೆ ಎಂದ ನ್ಯಾಯಪೀಠ

Suddi Udaya
error: Content is protected !!