ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

ಮುಂಡಾಜೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದೊಂದಿಗೆ ಮುಂಡಾಜೆ ಶಾರದ ನಗರ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಇದರ ಉದ್ಘಾಟನಾ ಕಾರ್ಯಕ್ರಮವು ನ. 17ರಂದು ಶ್ರೀ ದುರ್ಗಾಪರಮೇಶ್ವರೀ ಆರಾಧನಾ ಮಂದಿರದ ವಠಾರದಲ್ಲಿ ನಡೆಯಿತು.

ಅನಂತ್ ಭಟ್ ಮಚ್ಚಿಮಲೆ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ನಮ್ಮ ಪುರಾಣವನ್ನು ಮುಂದಿನ ಪೀಳಿಗೆಗೆ, ನವರಸ ಭರಿತ ರೂಪಕದ ಮೂಲಕ ತಿಳಿಸುವಂತಹದ್ದು ಯಕ್ಷಗಾನ ಕಲೆ. ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉನ್ನತವಾಗಿ ಬೆಳಗಲಿ, ನಮ್ಮೆಲ್ಲರ ಸಹಕಾರ ಸದಾ ಇರುತ್ತದೆ ಎಂದು ಶುಭಹಾರೈಸಿದರು.

ಯಕ್ಷಗುರು ರವಿಕುಮಾರ್ ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿ, ಯಕ್ಷಗಾನದಲ್ಲಿ ನಾವು ಮಾತ್ರ ಕಾಣಿಸಿಕೊಳ್ಳುವುದಲ್ಲ, ನಮ್ಮ ಊರು ಕಾಣಿಸಿಕೊಳ್ಳಬೇಕು, ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಯಕ್ಷಗಾನ ಅಧ್ಯಯನ ಕೇಂದ್ರ ಪ್ರಾರಂಭ ಮಾಡಿರುವಂತಹದ್ದು. ನಾವು ಕಷ್ಟಪಟ್ಟು ಕಲಿತಂತಹ ವಿದ್ಯೆಯನ್ನು ಇನ್ನೊಬ್ಬನಿಗೆ ಧಾರೆ ಎರೆದು ಕೊಟ್ಟರೆ ಗುರು ಋಣದಿಂದ ಮುಕ್ತಿ ಹೊಂದಲು ಸಾಧ್ಯ ಎಂದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಅಧ್ಯಕ್ಷತೆಯನ್ನು ವಹಿಸಿದ್ದರು.

ಅತಿಥಿಗಳಾಗಿ ಯಕ್ಷಗಾನ ಅಕಾಡೆಮಿ ಸದಸ್ಯರಾದ ದಯಾನಂದ ಪಿ. ಬೆಳಾಲು, ರಾಘವ ಹೆಚ್. ಗೇರುಕಟ್ಟೆ, ಯಕ್ಷಗಾನ ಗುರುಗಳು ದಿವಾಣ ಶಿವಶಂಕರ್ ಭಟ್, ಕಟೀಲು ಮೇಳದ ಯಕ್ಷಗಾನ ಕಲಾವಿದ ರಾಮಣ್ಣ ಭಂಡಾರಿ, ಮುಂಡಾಜೆ ಕಲಾಕುಂಚ ಕಲಾವಿದ ಜಯರಾಮ ಕೆ., ಕೀರ್ತನಾ ಕಲಾತಂಡ ಸಂಚಾಲಕ ಸದಾನಂದ ಬಿ., ಸಿವಿಲ್ ಗುತ್ತಿಗೆದಾರರು ಚೆನ್ನಕೇಶವ ನಾಯ್ಕ ಅರಸಮಜಲು, ಶ್ರೀ ಮಂಜುಶ್ರೀ ಭಜನಾ ಮಂಡಳಿ ಕಾರ್ಯದರ್ಶಿ ಉಮೇಶ ಆಚಾರ್ಯ, ಜನಪದ ಕಲಾವಿದೆ ಶ್ರೀಮತಿ ರವಿ ರಂಜಿನಿ ಉಪಸ್ಥಿತರಿದ್ದರು.

ಕಲಾವಿದರಾದ ಜಯರಾಮ್ ಕೆ. ನಿರೂಪಿಸಿದರು.

Related posts

ಸರಕಾರಿ ನೌಕರರ ಕ್ರೀಡಾಕೂಟ: ಯೋಗಾಸನ ಸ್ಪರ್ಧೆಯಲ್ಲಿ ರೆಖ್ಯದ ಬಾಲಕೃಷ್ಣರವರಿಗೆ ಚಿನ್ನದ ಪದಕ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ “ಕ್ರೀಡಾ ಕಲರವ 2023”

Suddi Udaya

ಕಳೆಂಜ: ಅಕ್ರಮ ಗೋ ಸಾಗಾಟ: ಇಬ್ಬರ ಬಂಧನ

Suddi Udaya
error: Content is protected !!