25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

ಮುಂಡಾಜೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದೊಂದಿಗೆ ಮುಂಡಾಜೆ ಶಾರದ ನಗರ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಇದರ ಉದ್ಘಾಟನಾ ಕಾರ್ಯಕ್ರಮವು ನ. 17ರಂದು ಶ್ರೀ ದುರ್ಗಾಪರಮೇಶ್ವರೀ ಆರಾಧನಾ ಮಂದಿರದ ವಠಾರದಲ್ಲಿ ನಡೆಯಿತು.

ಅನಂತ್ ಭಟ್ ಮಚ್ಚಿಮಲೆ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ನಮ್ಮ ಪುರಾಣವನ್ನು ಮುಂದಿನ ಪೀಳಿಗೆಗೆ, ನವರಸ ಭರಿತ ರೂಪಕದ ಮೂಲಕ ತಿಳಿಸುವಂತಹದ್ದು ಯಕ್ಷಗಾನ ಕಲೆ. ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉನ್ನತವಾಗಿ ಬೆಳಗಲಿ, ನಮ್ಮೆಲ್ಲರ ಸಹಕಾರ ಸದಾ ಇರುತ್ತದೆ ಎಂದು ಶುಭಹಾರೈಸಿದರು.

ಯಕ್ಷಗುರು ರವಿಕುಮಾರ್ ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿ, ಯಕ್ಷಗಾನದಲ್ಲಿ ನಾವು ಮಾತ್ರ ಕಾಣಿಸಿಕೊಳ್ಳುವುದಲ್ಲ, ನಮ್ಮ ಊರು ಕಾಣಿಸಿಕೊಳ್ಳಬೇಕು, ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಯಕ್ಷಗಾನ ಅಧ್ಯಯನ ಕೇಂದ್ರ ಪ್ರಾರಂಭ ಮಾಡಿರುವಂತಹದ್ದು. ನಾವು ಕಷ್ಟಪಟ್ಟು ಕಲಿತಂತಹ ವಿದ್ಯೆಯನ್ನು ಇನ್ನೊಬ್ಬನಿಗೆ ಧಾರೆ ಎರೆದು ಕೊಟ್ಟರೆ ಗುರು ಋಣದಿಂದ ಮುಕ್ತಿ ಹೊಂದಲು ಸಾಧ್ಯ ಎಂದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಅಧ್ಯಕ್ಷತೆಯನ್ನು ವಹಿಸಿದ್ದರು.

ಅತಿಥಿಗಳಾಗಿ ಯಕ್ಷಗಾನ ಅಕಾಡೆಮಿ ಸದಸ್ಯರಾದ ದಯಾನಂದ ಪಿ. ಬೆಳಾಲು, ರಾಘವ ಹೆಚ್. ಗೇರುಕಟ್ಟೆ, ಯಕ್ಷಗಾನ ಗುರುಗಳು ದಿವಾಣ ಶಿವಶಂಕರ್ ಭಟ್, ಕಟೀಲು ಮೇಳದ ಯಕ್ಷಗಾನ ಕಲಾವಿದ ರಾಮಣ್ಣ ಭಂಡಾರಿ, ಮುಂಡಾಜೆ ಕಲಾಕುಂಚ ಕಲಾವಿದ ಜಯರಾಮ ಕೆ., ಕೀರ್ತನಾ ಕಲಾತಂಡ ಸಂಚಾಲಕ ಸದಾನಂದ ಬಿ., ಸಿವಿಲ್ ಗುತ್ತಿಗೆದಾರರು ಚೆನ್ನಕೇಶವ ನಾಯ್ಕ ಅರಸಮಜಲು, ಶ್ರೀ ಮಂಜುಶ್ರೀ ಭಜನಾ ಮಂಡಳಿ ಕಾರ್ಯದರ್ಶಿ ಉಮೇಶ ಆಚಾರ್ಯ, ಜನಪದ ಕಲಾವಿದೆ ಶ್ರೀಮತಿ ರವಿ ರಂಜಿನಿ ಉಪಸ್ಥಿತರಿದ್ದರು.

ಕಲಾವಿದರಾದ ಜಯರಾಮ್ ಕೆ. ನಿರೂಪಿಸಿದರು.

Related posts

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ನಾರಾವಿ: ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಸಂಘದ ಸದಸ್ಯ ಮೇಲ್ವಿನ್ ಡಿಸೋಜ ನಂದಿಲ ರವರಿಗೆ ಚಿಕಿತ್ಸಾ ನೆರವು

Suddi Udaya

ಉಜಿರೆ: ರತ್ನಮಾನಸದಲ್ಲಿ ಮಾತೃ, ಪಿತೃ ,ಪೋಷಕರ ಸಭೆ ಹಾಗೂ ಗುರು ವಂದನ ಕಾರ್ಯಕ್ರಮ

Suddi Udaya

ಉಪ್ಪಾರಪಳಿಕೆ ಸ.ಹಿ.ಪ್ರಾ. ಶಾಲೆಗೆ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಮತ್ತು ಸೌತಡ್ಕ ಸೇವಾ ಸಮಿತಿಯ ವತಿಯಿಂದ ಪುಸ್ತಕ ವಿತರಣೆ

Suddi Udaya
error: Content is protected !!