25.7 C
ಪುತ್ತೂರು, ಬೆಳ್ತಂಗಡಿ
March 7, 2026
ಜಿಲ್ಲಾ ಸುದ್ದಿ

ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ ಉದ್ಘಾಟನೆ

  • ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 8,9 ಹಾಗೂ 10ನೇ ತರಗತಿಯ 600 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗಿ

ಬೆಳ್ತಂಗಡಿ : ರೋಟರಿ ಇಂಟರಾಕ್ಟ್ ಜಿಲ್ಲೆ 3181 ನ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್ – 2024ನ್ನು ನ.17ರಂದು ಉಜಿರೆಯ ಎಸ್.ಡಿ.ಎಂ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ರೋಟರಿ ಇಂಟರಾಕ್ಟ್ ಜಿಲ್ಲೆ 3181 ರ ಜಿಲ್ಲಾ ಗವರ್ನರ್ ರೊ. ವಿಕ್ರಂದತ್ತ, ಜಿಲ್ಲಾ ಡಿಐಆರ್ ಲಿಖಿತ, ಡಿಸ್ಟ್ರಿಕ್ಟ್ ಗವನ೯ರ್ ಇಲೆಕ್ಟ್ ರಾಮಕೃಷ್ಣ, ಡಿಸ್ಟ್ರಿಕ್ಟ್ ಗವನ೯ರ್ ನಾಮಿನಿ ಸತೀಶ್ ಬೊಳಾರ್, ಡಿಸ್ಟ್ರಿಕ್ಟ್ ಕೌನ್ಸಿಲರ್ ದೇವದಾಸ್, ಕ್ಲಬ್ ನ ಎ.ಜಿ ಮಹಮ್ಮದ್ ವಳವೂರು ಮತ್ತು ಜಯರಾಮ, ಜಿಲ್ಲಾ ಕಾಯ೯ದಶಿ೯ ವಿತೇಶ್ ಬಾಳಿಗಾ, ಝೊನಲ್ ಲೆಫ್ಟಿನೆಂಟ್ ಮನೋರಮಾ, ಇಂಟರ್ ಚೇಯರ್ ಮೆನ್ ಡಾ.ಜಯಕುಮಾರ್ , ಬೆಳ್ತಂಗಡಿ ರೋಟರಿ ಕಾಯ೯ದಶಿ೯ ಸಂದೇಶ ರಾವ್ ಭಾಗವಹಿಸಿದ್ದರು.ರೋ. ಪೂರನ್ ವರ್ಮ ಅಧ್ಯಕ್ಷರು ರೋಟರಿ ಕ್ಲಬ್, ಬೆಳ್ತಂಗಡಿ ಸ್ವಾಗತಿಸಿದರು.
ರೋಟರಿಯ ಜಿಲ್ಲೆಯ ವಿವಿಧ ಪದಾಧಿಕಾರಿಗಳುಭಾಗವಹಿಸಿದ್ದಾರೆ.

ಯೂತ್ ಕಾರ್ನಿವಾಲ್ ಪ್ರಯುಕ್ತ ನ.16 ರ ಸಂಜೆ 5 ಗಂಟೆಯಿಂದ ವಿಷಯಾಧಾರಿತ ಸಾಂಸ್ಕೃತಿಕ ವೈವಿಧ್ಯ ಸ್ಪರ್ಧೆ ನಡೆಯಿತು .ಜೊತೆಗೆ ಹಾಡು, ರಸಪ್ರಶ್ನೆ, ಭಾಷಣ ಸ್ಪರ್ಧೆ, ಛದ್ಮವೇಷ ಹಾಗೂ ಪ್ರಬಂಧ ಬರಹ ಸ್ಪರ್ಧೆಗಳು ನಡೆಯಿತು.
ಇದರ ಜೊತೆಗೆ ವ್ಯಕ್ತಿತ್ವ ವಿಕಸನ ಶಿಬಿರಗಳು, ಇಂಟರಾಕ್ಟರ್-ಗಳ ಕೌಶಲ್ಯ ಪ್ರದರ್ಶಿಸುವ ವಸ್ತುಪ್ರದರ್ಶನ ಹಾಗೂ ವೈವಿಧ್ಯಮಯ ಆಹಾರದ ವ್ಯವಸ್ಥೆ. ಅಂತೆಯೇ ಯೂತ್ ಕಾರ್ನಿವಾಲ್ ಪುಯುಕ್ತ ಲಕ್ಕಿ ಗೇಮ್ಸ್, ಕರಾವಳಿಯ ಸಾಂಪ್ರದಾಯಿಕ ಆಟಗಳ ಸ್ಪರ್ಧೆ ಮೊದಲಾದ ಚಟುವಟಿಕೆಗಳನ್ನು ಕೂಡಾ ನಡೆಯಲಿದೆ.

ಬೆಳ್ತಂಗಡಿಯ ರೋಟರಿ ಕ್ಲಬ್ ಆಯೋಜಿಸಿರುವ ಈ ಯೂತ್ ಕಾರ್ನಿವಾಲ್-ನಲ್ಲಿ ಮೈಸೂರು, ಚಾಮರಾಜನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ 8,9 ಹಾಗೂ 10ನೇ ತರಗತಿಯ ಸುಮಾರು 600 ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.

Related posts

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya

ವೇಣೂರು: ಅಕ್ರಮ ಗೋ ಸಾಗಾಟ: ಆರೋಪಿಗಳು ಪೊಲೀಸರ ವಶ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಚಾತುರ್ಮಾಸ್ಯ ವ್ರತದಲ್ಲಿರುವ ಕ‌ನ್ಯಾಡಿ ಶ್ರೀರಾಮ‌ ಕ್ಷೇತ್ರ ಮಹಾ ಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದ ಉತ್ತರಕನ್ನಡ ಹಲಿಯಾಳ ಕ್ಷೇತ್ರದ ಶಾಸಕ, ಕರ್ನಾಟಕ ಸರಕಾರದ ಆಡಳಿತ ಸುಧಾರಣ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ

Suddi Udaya

ಕುಲಶೇಖರ ಬ್ರಹ್ಮಕಲಶೋತ್ಸವ ಸಂಭ್ರಮ: ಶ್ರೀ ವೀರ ನಾರಾಯಣ ದೇವರಿಗೆ ದಾನಿಗಳಿಂದ ನೂತನ ರಥ ಸಮರ್ಪಣೆ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya
error: Content is protected !!