27.9 C
ಪುತ್ತೂರು, ಬೆಳ್ತಂಗಡಿ
March 6, 2026
ಸಂಘ-ಸಂಸ್ಥೆಗಳು

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

ಪದ್ಮುಂಜ : ಮೂಲ್ಯ ಯಾನೆ ಕುಲಾಲ ಸೇವಾ ಸಂಘ ಕಣಿಯೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ವಿಶ್ವನಾಥ್ ಕುಲಾಲ್ ಮಲೆಂಗಲ್ಲು ಇವರ ಮನೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಉದಯ್ ಬಿ.ಕೆ ಬಂದಾರು ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನ ಪಡೆಯುವುದರ ಮೂಲಕ ಸಮಾಜ ಹಾಗೂ ದೇಶವನ್ನು ಕಟ್ಟುವ ಕೆಲಸವನ್ನು ಮಾಡಬೇಕು ಮತ್ತು ಅವರ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು.

ಕಣಿಯೂರು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದರಾದ ವಿಶ್ವನಾಥ್ ಮಲಿಂಗಲ್ಲು ಇವರ ಸಾಧನೆಯನ್ನ ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಸಂಘದ ಅಧ್ಯಕ್ಷರಾದ ಉಮೇಶ್ ಪಿಲಿಗೂಡು ವಹಿಸಿಕೊಂಡರು. ಅಶೋಕ್ ಬರಂಬು, ವಿಶ್ವನಾಥ್ ಮಲೆಂಗಲ್ಲು ಉಪಸ್ಥಿತರಿದ್ದರು. ಕುಮಾರಿ ಹರಿನಾಕ್ಷಿ ಸ್ವಾಗತಿಸಿದರು, ಕುಮಾರಿ ರಮ್ಯಾ ವಂದಿಸಿದರು, ಕುಮಾರಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya

ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ ವತಿಯಿಂದ ಸ.ಕಿ.ಪ್ರಾ. ಶಾಲೆಯಲ್ಲಿ ಜನಗಣಮನ ಬರವಣಿಗೆ ಸ್ಪರ್ಧೆ

Suddi Udaya

ಉಜಿರೆ: ಶ್ರೀ ಶಾರದಾ ಪೂಜೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಎಕ್ಸೆಲ್ ವಿದ್ಯಾ ಸಂಸ್ಥೆಗಳ ಸುಮಂತ್ ಕುಮಾರ್ ಜೈನ್‌ರವರಿಗೆಮಲೇಷಿಯಾ-ಇಂಡಿಯಾ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!