25.5 C
ಪುತ್ತೂರು, ಬೆಳ್ತಂಗಡಿ
June 8, 2026
ಸಂಘ-ಸಂಸ್ಥೆಗಳು

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

ಪದ್ಮುಂಜ : ಮೂಲ್ಯ ಯಾನೆ ಕುಲಾಲ ಸೇವಾ ಸಂಘ ಕಣಿಯೂರು ಇದರ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಭಾನುವಾರ ವಿಶ್ವನಾಥ್ ಕುಲಾಲ್ ಮಲೆಂಗಲ್ಲು ಇವರ ಮನೆಯಲ್ಲಿ ನಡೆಯಿತು.

ಮುಖ್ಯ ಅತಿಥಿಯಾಗಿ ಆಗಮಿಸಿದ ವಕೀಲರಾದ ಉದಯ್ ಬಿ.ಕೆ ಬಂದಾರು ಮಾತನಾಡಿ ವಿದ್ಯಾರ್ಥಿಗಳು ಸಂಸ್ಕಾರಯುತ ಶಿಕ್ಷಣವನ್ನ ಪಡೆಯುವುದರ ಮೂಲಕ ಸಮಾಜ ಹಾಗೂ ದೇಶವನ್ನು ಕಟ್ಟುವ ಕೆಲಸವನ್ನು ಮಾಡಬೇಕು ಮತ್ತು ಅವರ ಭವಿಷ್ಯವನ್ನು ರೂಪಿಸುವಲ್ಲಿ ಪೋಷಕರು ಪ್ರಮುಖ ಪಾತ್ರವನ್ನು ವಹಿಸಬೇಕು ಎಂದು ಹೇಳಿದರು.

ಕಣಿಯೂರು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಯಕ್ಷಗಾನ ಕಲಾವಿದರಾದ ವಿಶ್ವನಾಥ್ ಮಲಿಂಗಲ್ಲು ಇವರ ಸಾಧನೆಯನ್ನ ಗುರುತಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಣಿಯೂರು ಸಂಘದ ಅಧ್ಯಕ್ಷರಾದ ಉಮೇಶ್ ಪಿಲಿಗೂಡು ವಹಿಸಿಕೊಂಡರು. ಅಶೋಕ್ ಬರಂಬು, ವಿಶ್ವನಾಥ್ ಮಲೆಂಗಲ್ಲು ಉಪಸ್ಥಿತರಿದ್ದರು. ಕುಮಾರಿ ಹರಿನಾಕ್ಷಿ ಸ್ವಾಗತಿಸಿದರು, ಕುಮಾರಿ ರಮ್ಯಾ ವಂದಿಸಿದರು, ಕುಮಾರಿ ನಿಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.

Related posts

ಬಂಟರ ಯಾನೆನಾಡವರ ಸಂಘ ಬೆಳ್ತಂಗಡಿ ನೇತೃತ್ವದಲ್ಲಿ: ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ – ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ. ವಿಶ್ವ ಬಂಟರ ಮಾಹಿತಿ ಕೋಶ’ಕ್ಕಾಗಿ ಕುಟುಂಬದ ಸಮಗ್ರ ಮಾಹಿತಿ ಸಂಗ್ರಹ: ಅಜಿತ್ ಕುಮಾರ್ ರೈ ಮಾಲಾಡಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಎಸ್.ಡಿ.ಪಿ.ಐ ತೀವ್ರ ಖಂಡನೆ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!