April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-24ನೇ ಸಾಲಿನ ವಾರ್ಷಿಕ ಮಹಾಸಭೆ

ಉಜಿರೆ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರ 2023-2024 ನೇ ಸಾಲಿನ ವಾರ್ಷಿಕ ಮಹಾಸಭೆ ನ. 17ರಂದು ಉಜಿರೆ ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಇವರ ಅಧ್ಯಕ್ಷತೆಯಲ್ಲಿ ಜರುಗಿತು.

ವೇದಿಕೆಯಲ್ಲಿ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ ಇವರು ಉಪಸ್ಥಿತರಿದ್ದರು.

ಇತ್ತೀಚಿಗೆ ಅಗಲಿದ ಸಂಘದ ಸದಸ್ಯರಾದ ದಿ.ಸುಂದರ ಗೌಡ ಇಚ್ಚಿಲ ಮತ್ತು ಇಂದಿರಾ ಎಸ್.ಗೌಡ ಮಾಳಿಗೆಮನೆ ಇವರಿಗೆ ನುಡಿನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಸುರೇಶ್ ಗೌಡ ಕೂಡಿಗೆ ಅವರ ಬಗ್ಗೆ ಮಾತನಾಡಿದರು.

ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು ಸಂಘದ ಅಭಿವೃದ್ಧಿಗೆ ತ್ಯಾಗ ಧನಸಹಾಯ ಬಹಳ ಮುಖ್ಯವಾಗಿರುತ್ತದೆ ಎಂದರು.

ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷರಾದ ಅನಿಲ್ ಗೌಡ ಅಂತರ, ಕಾಲಬೈರವೇಶ್ವರ ಬ್ಯಾಂಕಿನ ಮುಖ್ಯಕಾರ್ಯನಿರ್ವಾಹಣಾ ಧಿಕಾರಿ ದಿನೇಶ್ ಗೌಡ ಕಲ್ಲಾಜೆ ಉಪಸ್ಥಿತರಿದ್ದರು.

ಮಮತಾ ಶಿವರಾಮ ಗೌಡ ಮತ್ತು ಶ್ರೀಮತಿ ಭವ್ಯ ಸುರೇಂದ್ರ ಹುಂಕ್ರೋಟ್ಟು ಪ್ರಾರ್ಥನೆ ನೆರವೇರಿಸಿದರು. ಭರತ್ ಕುಮಾರ್ ಗೌಡ ಹಾನಿಬೆಟ್ಟು ಸ್ವಾಗತಿಸಿದರು. ಸಂಘದ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ವಾರ್ಷಿಕ ವರದಿ ವಾಚಿಸಿದರು. ಸಂಘದ ಕೋಶಾಧಿಕಾರಿ ರಾಘವೇಂದ್ರ ಗೌಡ ಪೊದುoಬಿಲ ಲೆಕ್ಕ ಪತ್ರ ಮಂಡಿಸಿದರು.‌ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ ಧನ್ಯವಾದವಿತ್ತರು. ಯುವ ವೇದಿಕೆ ಕಾರ್ಯದರ್ಶಿಯಾದ ಪ್ರಕಾಶ್ ಗೌಡ ಕೆದ್ಲ ಮತ್ತು ಗೀತಾ ಚಿದಾನಂದ ಗೌಡ ಬಡೆಕೊಟ್ಟು ನಿರೂಪಿಸಿದರು.

Related posts

4ನೇ ಅಂತಾರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್: ಉಜಿರೆ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಉಜಿರೆಯಲ್ಲಿ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಮತದಾನ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

Suddi Udaya

ಮದ್ದಡ್ಕ ಶ್ರೀರಾಮ ಸೇವಾ ಸಮಿತಿ, ವಿಶ್ವ ಹಿಂದೂ ಪರಿಷತ್ ಭಜರಂಗದಳ ಮದ್ದಡ್ಕ ಇದರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯಕ್ತ ಮೊಸರು ಕುಡಿಕೆ ಉತ್ಸವ

Suddi Udaya

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವೇಣೂರು ಶಾಖೆಯಲ್ಲಿ ಈ ಸ್ಟಾಂಪಿಂಗ್ ಉದ್ಘಾಟನೆ

Suddi Udaya

ರಾಷ್ಟ್ರಮಟ್ಟದ ಟೆಕ್ನೋ ಕಲ್ಚರ್ ಫೆಸ್ಟ್ ಇನ್ಸಿಗ್ನಿಯಾ: ಉಜಿರೆ ಎಸ್.ಡಿ.ಎಂ.ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya
error: Content is protected !!