25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಂಘ-ಸಂಸ್ಥೆಗಳು

ಮುಂಡಾಜೆ: ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉದ್ಘಾಟನೆ

ಮುಂಡಾಜೆ: ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಸಹಯೋಗದೊಂದಿಗೆ ಮುಂಡಾಜೆ ಶಾರದ ನಗರ ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಇದರ ಉದ್ಘಾಟನಾ ಕಾರ್ಯಕ್ರಮವು ನ. 17ರಂದು ಶ್ರೀ ದುರ್ಗಾಪರಮೇಶ್ವರೀ ಆರಾಧನಾ ಮಂದಿರದ ವಠಾರದಲ್ಲಿ ನಡೆಯಿತು.

ಅನಂತ್ ಭಟ್ ಮಚ್ಚಿಮಲೆ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿ, ನಮ್ಮ ಪುರಾಣವನ್ನು ಮುಂದಿನ ಪೀಳಿಗೆಗೆ, ನವರಸ ಭರಿತ ರೂಪಕದ ಮೂಲಕ ತಿಳಿಸುವಂತಹದ್ದು ಯಕ್ಷಗಾನ ಕಲೆ. ಶ್ರೀ ದುರ್ಗಾಪರಮೇಶ್ವರೀ ಯಕ್ಷಗಾನ ಅಧ್ಯಯನ ಕೇಂದ್ರ ಉನ್ನತವಾಗಿ ಬೆಳಗಲಿ, ನಮ್ಮೆಲ್ಲರ ಸಹಕಾರ ಸದಾ ಇರುತ್ತದೆ ಎಂದು ಶುಭಹಾರೈಸಿದರು.

ಯಕ್ಷಗುರು ರವಿಕುಮಾರ್ ಮುಂಡಾಜೆ ಪ್ರಾಸ್ತವಿಕವಾಗಿ ಮಾತನಾಡಿ, ಯಕ್ಷಗಾನದಲ್ಲಿ ನಾವು ಮಾತ್ರ ಕಾಣಿಸಿಕೊಳ್ಳುವುದಲ್ಲ, ನಮ್ಮ ಊರು ಕಾಣಿಸಿಕೊಳ್ಳಬೇಕು, ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಅವಕಾಶ ಸಿಗಬೇಕು ಎಂಬ ಉದ್ದೇಶದಿಂದ ಯಕ್ಷಗಾನ ಅಧ್ಯಯನ ಕೇಂದ್ರ ಪ್ರಾರಂಭ ಮಾಡಿರುವಂತಹದ್ದು. ನಾವು ಕಷ್ಟಪಟ್ಟು ಕಲಿತಂತಹ ವಿದ್ಯೆಯನ್ನು ಇನ್ನೊಬ್ಬನಿಗೆ ಧಾರೆ ಎರೆದು ಕೊಟ್ಟರೆ ಗುರು ಋಣದಿಂದ ಮುಕ್ತಿ ಹೊಂದಲು ಸಾಧ್ಯ ಎಂದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಗಣೇಶ್ ಬಂಗೇರ ಅಧ್ಯಕ್ಷತೆಯನ್ನು ವಹಿಸಿದ್ದರು.

ಅತಿಥಿಗಳಾಗಿ ಯಕ್ಷಗಾನ ಅಕಾಡೆಮಿ ಸದಸ್ಯರಾದ ದಯಾನಂದ ಪಿ. ಬೆಳಾಲು, ರಾಘವ ಹೆಚ್. ಗೇರುಕಟ್ಟೆ, ಯಕ್ಷಗಾನ ಗುರುಗಳು ದಿವಾಣ ಶಿವಶಂಕರ್ ಭಟ್, ಕಟೀಲು ಮೇಳದ ಯಕ್ಷಗಾನ ಕಲಾವಿದ ರಾಮಣ್ಣ ಭಂಡಾರಿ, ಮುಂಡಾಜೆ ಕಲಾಕುಂಚ ಕಲಾವಿದ ಜಯರಾಮ ಕೆ., ಕೀರ್ತನಾ ಕಲಾತಂಡ ಸಂಚಾಲಕ ಸದಾನಂದ ಬಿ., ಸಿವಿಲ್ ಗುತ್ತಿಗೆದಾರರು ಚೆನ್ನಕೇಶವ ನಾಯ್ಕ ಅರಸಮಜಲು, ಶ್ರೀ ಮಂಜುಶ್ರೀ ಭಜನಾ ಮಂಡಳಿ ಕಾರ್ಯದರ್ಶಿ ಉಮೇಶ ಆಚಾರ್ಯ, ಜನಪದ ಕಲಾವಿದೆ ಶ್ರೀಮತಿ ರವಿ ರಂಜಿನಿ ಉಪಸ್ಥಿತರಿದ್ದರು.

ಕಲಾವಿದರಾದ ಜಯರಾಮ್ ಕೆ. ನಿರೂಪಿಸಿದರು.

Related posts

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya

ನಾಪತ್ತೆಯಾಗಿದ್ದ ಕೊಯ್ಯೂರು ನಿವಾಸಿ ಮುಹಮ್ಮದ್ ಯಾಸಿರ್ ಬೆಂಗಳೂರಿನಲ್ಲಿ ಪತ್ತೆ

Suddi Udaya

ಡಿ.17-19: ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಕ್ಷೇತ್ರದ ಷಷ್ಠೀ ಮಹೋತ್ಸವ

Suddi Udaya

ಸುಳ್ಯ ನಗರ ಪಂಚಾಯಿತಿ ಮುಖ್ಯಾಧಿಕಾರಿ ಎಂ.ಎಚ್‌. ಸುಧಾಕರ್ ವರ್ಗಾವಣೆ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಬಂಟ ಕ್ರೀಡೋತ್ಸವ

Suddi Udaya
error: Content is protected !!