25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

ಧರ್ಮಸ್ಥಳ : ರಾಷ್ಟ್ರೀಯ ತುಳು ಗುಡಿಗಾರರ ಸಂಘ ದಕ್ಷಿಣ ಕನ್ನಡ ಜಿಲ್ಲೆ -ಉಡುಪಿ ಜಿಲ್ಲೆ ಕಟ್ಟದಬೈಲು ಧರ್ಮಸ್ಥಳ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ 2023-24 ಮತ್ತು ಕೆಸರು ಗದ್ದೆ ಕಾರ್ಯಕ್ರಮ ನ.17 ರಂದು ಶ್ರೀ ರಾಮಭಜನಾ ಮಂದಿರ ಕಟ್ಟದಬೈಲು ಇಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ರಾಷ್ಟ್ರೀಯ ತುಳು ಗುಡಿಗಾರ್ ಸಂಘದ ಅಧ್ಯಕ್ಷ ರವೀಂದ್ರ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ತುಳು ಗುಡಿಗಾರ್ ಸಂಘ ಉಪಾಧ್ಯಕ್ಷರಾದ ಮಂಜುನಾಥ ಗುಡಿಗಾರ್ ಕಟ್ಟದಬೈಲು, ಶಾಂತಿರಾಜ್ ಗುಡಿಗಾರ್ ಅಳದಂಗಡಿ, ಜೊತೆ ಕಾರ್ಯದರ್ಶಿ ಆದರ್ಶ ಗುಡಿಗಾರ್, ಕೋಶಾಧಿಕಾರಿ ಕವಿತಾ ರಾಜೇಂದ್ರ ಗುಡಿಗಾರ್ ಅಂತರಬೈಲು, ನಿರ್ದೇಶಕರಾದ ರಮೇಶ್ ಗುಡಿಗಾರ್ ಅಂತರಬೈಲು, ಉದಯ ಗುಡಿಗಾರ್, ಮುಂಬೈ, ಗಣೇಶ ಗುಡಿಗಾರ್ ನಾವೂರು, ದೇವಿಪ್ರಸಾದ್ ಎನ್. ಗುಡಿಗಾರ್ ಉಡುಪಿ, ಚಂದ್ರಶೇಖರ ಗುಡಿಗಾರ್ ಸವಣಾಲು, ಪ್ರಮೋದ್ ಗುಡಿಗಾರ್ ಉಡುಪಿ, ಸತ್ಯನಾರಾಯಣ ಗುಡಿಗಾರ್ ಅಂತರಬೈಲು, ವಿಶ್ವೇಶ್ ಗುಡಿಗಾರ್ ಅಂತರಬೈಲು ಉಪಸ್ಥಿತರಿದ್ದರು.

ಈ ವೇಳೆ ಮಕ್ಕಳಿಗೆ ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಸಂಜೆ ನಡೆದ ಸಮಾರೋಪದಲ್ಲಿ ಹಲವು ಗಣ್ಯರು ಭಾಗವಹಿಸಿ ಆಟೋಟ ಸ್ಪರ್ಧೆಯಲ್ಲಿ ಜಯಶಾಲಿಯಾದ ಎಲ್ಲಾ ಸ್ಪರ್ಧಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು..

ಈ ಸಂದರ್ಭದಲ್ಲಿ ರಾಷ್ಟ್ರೀಯ ತುಳು ಗುಡಿಗಾರರ ಸಂಘ ಸರ್ವ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ರಸ್ತೆಯ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟ ಪಡಂಗಡಿ ಪಂಚಾಯತ್ ಸದಸ್ಯರು

Suddi Udaya

ಗದ್ದೆಯಿಂದ ನೇಜಿ ತೆಗೆದು ತಾವೇ ನಾಟಿ ಮಾಡಿದ ಮಕ್ಕಳು: ಕೊಯ್ಯೂರು ಸರಕಾರಿ ಶಾಲೆಯ 70 ಮಕ್ಕಳಿಗೆ ಕೃಷಿ ಪಾಠದ ಸಂಭ್ರಮ ; ಶಿಕ್ಷಕರ, ಪೋಷಕರ ಸಾಥ್

Suddi Udaya

ಕುತ್ಲೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತ್ರೈಮಾಸಿಕ ಸಭೆ ಹಾಗೂ ಮಂಜೂರಾತಿ ಪತ್ರ ವಿತರಣೆ

Suddi Udaya

ಶಟಲ್ ಬ್ಯಾಡ್ಮಿಂಟನ್: ವಾಣಿ ಆಂ.ಮಾ. ಶಾಲೆಯ ಪ್ರಾಥಮಿಕ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ

Suddi Udaya
error: Content is protected !!