July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

ಬೆಳ್ತಂಗಡಿ : ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿಯನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ನ.18 ರಂದು ಆಚರಿಸಲಾಯಿತು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ “ನಾನು” ಎಂಬ ಅಹಂ ನಮ್ಮಿಂದ ಹೋದಾಗ ಮಾತ್ರ ಭಗವಂತನನ್ನು ಕಂಡುಕೊಳ್ಳುವುದಕ್ಕೆ ಸಾಧ್ಯ. ಸಾತ್ವಿಕ ಬದುಕನ್ನು ಪೂರೈಸಿದರೆ ಮೋಕ್ಷವನ್ನು ಕಾಣಲು ಸಾಧ್ಯ. ಮೋಕ್ಷವನ್ನು ಕಾಣುವುದೇ ಮಾನವ ಜನ್ಮದ ಉದ್ದೇಶ. ಜನನ ಮರಣದ ಚಕ್ರದಿಂದ ಹೊರಗೆ ಬರುವುದಕ್ಕೆ ಕನಕದಾಸರಂತಹ ಸಂತರುಗಳು ದಾರಿ ತೋರಿಸಿದ್ದಾರೆ. ಭಕ್ತಿ ಪರಂಪರೆಯ ಶ್ರೇಷ್ಠರು ಕನಕದಾಸರು.

ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಕನಕದಾಸರ ಜೀವನ ಚರಿತ್ರೆಯ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಉಪ ತಹಸೀಲ್ದಾರ್ ಮಲ್ಲಪ್ಪ ನಡುಗಟ್ಟಿ, ಎ ಎಸ್ ಐ ದುರ್ಗಾಪ್ರಸಾದ್ ಉಪಸ್ಥಿತರಿದ್ದರು.

ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ನಿರೂಪಿಸಿದರು. ಪರಮೇಶ್ ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯನ್ನು ಹಾಡಿದರು.

Related posts

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ ಗೀತೆಗಳ ಗಾಯನ ಕಾರ್ಯಾಗಾರ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಹಿರಿಯ ಯಕ್ಷಗಾನ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

Suddi Udaya

ಎಸ್.ಡಿ.ಪಿ.ಐ ಸೇರ್ಪಡೆಗೊಂಡಿದ್ದ ಜೆಡಿಎಸ್ ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸುಮತಿ ಹೆಗ್ಡೆಯವರ ನಿರ್ಧಾರ ಹಿಂತೆಗೆತ

Suddi Udaya

ಬೆಳ್ತಂಗಡಿ : ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಕಳೆಂಜ: ಕೊತ್ತೋಡಿ ನಿವಾಸಿ ಚನ್ನಕ್ಕ ನಿಧನ

Suddi Udaya
error: Content is protected !!