ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

ಬೆಳ್ತಂಗಡಿ: ವಕೀಲರು ವೃತ್ತಿಯಲ್ಲಿ ಪ್ರಕರಣಗಳ ಬಗ್ಗೆ ಸತತ ಪರಿಶ್ರಮ ಮತ್ತು ಅದ್ಯಯನ ನಡೆಸಿ ಕೆಲಸ ನಿರ್ವಹಿಸಿದಲ್ಲಿ ಕಕ್ಷಿಗಾರರಿಗೆ ನ್ಯಾಯ ದೊರಕುವ ಜೊತೆಗೆ ವೃತ್ತಿಯಲ್ಲಿ ಯಶಸ್ಸು ಕಾಣಲು ಸಾದ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ರಾಜೇಶ್‌ರೈ, ಕೈರಂಗಳ ಅಭಿಪ್ರಾಯಪಟ್ಟಿದ್ದಾರೆ.

ಅವರು ನ. 16 ರಂದು ಬೆಳ್ತಂಗಡಿ ವಕೀಲರ ಸಂಘಕ್ಕೆ ಭೇಟಿ ನೀಡಿ ವಕೀಲರನ್ನುದ್ದೇಶಿ ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ವಕೀಲರುಗಳು ಅಧ್ಯಯನಶೀಲತೆಯ ಮೂಲಕ ಪಾಂಡಿತ್ಯ ಹೊಂದಿದ್ದು ನ್ಯಾಯಂಗದಲ್ಲಿ ತಮ್ಮದೇ ಆದ ಗೌರವವನ್ನು ಹೊಂದಿದ್ದಾರೆ ಎಂದವರು ಈ ಸಂಧರ್ಭದಲ್ಲಿ ಹೇಳಿದರು.

ಯುವ ವಕೀಲರು ನ್ಯಾಯಲಯದ ಕಲಾಪಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಹಿರಿಯ ನ್ಯಾಯವಾದಿಗಳು ಪ್ರಕರಣ ನಡೆಸುವ ಸಂದರ್ಭವನ್ನು ಆಲಿಸುವ ಮೂಲಕ ಸಮಯದ ಸದ್ಬಳಕೆ ಮಾಡಿಕೊಳ್ಳಬೇಕೆಂದು ಅವರು ಯುವ ವಕೀಲರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ 6೦ ವರ್ಷ ಹಳೆಯದಾದ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣವನ್ನು ವೀಕ್ಷಿಸಿ ಹೊಸ ಕಟ್ಟಡ ಮಂಜೂರಾತಿಗಾಗಿ ಸರಕಾರದ ಮಟ್ಟದಲ್ಲಿ ಒತ್ತಡ ತರಲು ವಕೀಲರ ಸಂಘದ ಜೊತೆ ಕೈ ಜೋಡಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ ಸ್ವಾಗತಿಸಿ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಎ ಕಾರ್ಯಕ್ರಮ ನಿರೂಪಿಸಿದರು.

Related posts

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದರ್ಜೆ ಕಾಲೇಜಿನ ನೂತನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ನೂತನ ಧರ್ಮಾಧ್ಯಕ್ಷರಾಗಿ ಅಭಿಷಕ್ತರಾದ ಬಿಷಪ್ ಜೇಮ್ಸ್ ಪಟ್ಟೇರಿಲ್ ರವರನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಶ್ರೀ ಕೃಷ್ಣ ಆಸ್ಪತ್ರೆ,ಕಕ್ಕಿಂಜೆ ಸಹಸಂಸ್ಥೆ ಹೊಯ್ಸಳ ಹೆಲ್ತ್ ಕೇರ್, ಮೂಡಿಗೆರೆ ಹಾಗೂ ರೋಟರಿ ಕ್ಲಬ್, ಮೂಡಿಗೆರೆ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶಿಬರಾಜೆ ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಿತ್ಪಾವನ ಬ್ರಾಹ್ಮಣರ ಬಳಗ ಉಜಿರೆ-ಬೆಳ್ತಂಗಡಿ ಇದರ 13ನೇ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಕಳೆಂಜ ನಂದಗೋಕುಲ ಗೋಶಾಲೆಗೆ ರೂ.10 ಸಾವಿರ ದೇಣಿಗೆ

Suddi Udaya
error: Content is protected !!