March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ B ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ವಿಜಯ ಆರ್ ರವರ ಅಧ್ಯಕ್ಷತೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಸಮೃದ್ಧಿ ಬಿ ಸಂಘದ ಸದಸ್ಯರು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಅಶೋಕ್ ಕುಮಾರ್ ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಮೀನಾರವರು ಮಂಡಿಸಿದರು,
ಯೋಜನೆಯ ಕೃಷಿ ಅಧಿಕಾರಿಯಾದ ರಾಮಕುಮಾರ್ ಸಂಘಟನಾತ್ಮಕವಾಗಿ ಸಂಘವನ್ನು ಕಟ್ಟಿಕೊಂಡು ಒಕ್ಕೂಟದ ವ್ಯವಸ್ಥೆಗೆ ತಂದು ಸಂಘದ ಸಂಪೂರ್ಣ ಬೆಳವಣಿಗೆಗೆ ಒಕ್ಕೂಟವು ನಿರಂತರವಾಗಿ ಸಹಕಾರವನ್ನು ನೀಡಿ ಯೋಜನೆಯ ಎಲ್ಲ ಸೇವೆಗಳನ್ನು ಸದಸ್ಯರಿಗೆ ತಲುಪಿಸಲು ಒಕ್ಕೂಟವು ಯೋಜನೆಯ ಕೊಂಡಿಯಾಗಿ ಸಂಘಕ್ಕೆ ಸೇವೆಯನ್ನು ನೀಡುತ್ತಿದೆ ಎಂದರು.


ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸದಸ್ಯರಿಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.
ವಲಯ ಮೇಲ್ವಿಚಾರಕರು ಜನಾರ್ದನ್, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ, ನಿಕಟಪೂರ್ವ ಅಧ್ಯಕ್ಷರು ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು. ರವಿ ಎನ್ ಸ್ವಾಗತಿಸಿ, ವಸಂತ ವಂದಿಸಿದರು.

Related posts

ಕುವೆಟ್ಟು ಸ.ಉ. ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಕಾಯರ್ತಡ್ಕ ಸರಕಾರಿ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯನಂದ ಪೂಜಾರಿ: ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಗೇರುಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ರಚನೆ

Suddi Udaya

ಬಳಂಜ ಕರ್ಮಂದೊಟ್ಟು ಧರೆ ಕುಸಿದು ಅಪಾಯದಲ್ಲಿರುವ ಕೆಲವು ಮನೆಗಳಿಗೆ ಬೆಳ್ತಂಗಡಿ ತಹಶೀಲ್ದಾರ್ ಹಾಗೂ ತಾ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭೇಟಿ,

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

Suddi Udaya
error: Content is protected !!