22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿ

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

ಲಾಯಿಲ : ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿದ್ದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು ಇವರು ಇತ್ತೀಚೆಗೆ ಇದರ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಕಾರಣ ವಲಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಆದುದರಿಂದ ಅವರ ಸ್ಥಾನಕ್ಕೆ ಹೊಸದಾಗಿ ಅಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಕ್ರಿಯೆಯೂ ನ.18 ರಂದು ನೂತನ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಲಾಯಿಲದ ಸಿಆರ್ ಪಿ ಸಭಾಭವನದಲ್ಲಿ ವಲಯದ ಎಲ್ಲಾ ಭಜನಾ ಮಂಡಳಿಗಳ ಸಹಕಾರದೊಂದಿಗೆ ನಡೆಯಿತು.


ಈ ಸಭೆಯಲ್ಲಿ ಮುಂದಿನ ಅವಧಿಗೆ ವಲಯದ ಅಧ್ಯಕ್ಷರಾಗಿ ಶ್ರೀ ಸರಸ್ವತಿ ಭಜನಾ ಮಂಡಳಿ ವಿವೇಕಾನಂದ ನಗರ ಇದರ ಅಧ್ಯಕ್ಷ ಜನಾರ್ಧನ ಸರ್ವಾನುಮತದಿಂದ ಆಯ್ಕೆಯಾದರು.


ಸಭೆಯಲ್ಲಿ ಮಂಜುನಾಥೇಶ್ವರ ಭಜನಾ ಪರಿಷತ್ತಿನ ರಾಜ್ಯಾಧ್ಯಕ್ಷ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು, ವಲಯ ಭಜನಾ ಪರಿಷತ್ತಿನ ಕಾರ್ಯದರ್ಶಿ ಅಖಿಲೇಶ್, ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್, ಭಜನಾ ಪರಿಷತ್ತಿನ ವಲಯದ ಪದಾಧಿಕಾರಿಗಳು, ವಿವಿಧ ಭಜನಾ ಮಂಡಳಿಗಳ ಅಧ್ಯಕ್ಷರುಗಳು, ಕಾರ್ಯದರ್ಶಿಗಳು, ಪದಾಧಿಕಾರಿಗಳು, ಯೋಜನೆಯ ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya

ಪಿಲಿಗೂಡು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘ ಅಧ್ಯಕ್ಷರಾಗಿ ಚೈತ್ರಾ ಎಂ.ಜಿ., ಉಪಾಧ್ಯಕ್ಷರಾಗಿ ಪ್ರೇಮಾ ಸಿ.

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರು

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಎಸ್ ಬಿ ಐ ಲೈಫ್ ಇನ್ಸೂರೆನ್ಸ್ ನಿಂದ ವಿಮಾ ಪರಿಹಾರ

Suddi Udaya
error: Content is protected !!