July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

ಬೆಳ್ತಂಗಡಿ : ಖ್ಯಾತ ವಕೀಲ ಬೆಂಗಳೂರಿನ ನಾರಾಯಣ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನ.18 ರಂದು ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಮುತ್ತಪ್ಪ ರೈ ಮೃತಪಟ್ಟ ಬಳಿಕ ಎರಡನೇ ಪತ್ನಿ ಮತ್ತು ಮಕ್ಕಳ ವಿರುದ್ಧ ಆಸ್ತಿ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು‌. ವರ್ಷಗಳ ಬಳಿಕ ವಕೀಲ ನಾರಾಯಣ ಸ್ವಾಮಿ ಮಧ್ಯಸ್ಥಿಕೆ ನಡೆಸಿ ಎರಡನೇ ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ಆಸ್ತಿ ವಿಚಾರದಲ್ಲಿ ಎರಡನೇ ಪತ್ನಿಗೆ ಸುಮಾರು 100 ಕೋಟಿ ರೂಪಾಯಿ ಪಾಲು ಮಾಡಿಸಿ ಕೋರ್ಟ್ ಪ್ರಕರಣ ರಾಜಿಯಲ್ಲಿ ಮುಗಿಸಿದ್ದರು. ಈ ಬಳಿಕ ನಾರಾಯಣ ಸ್ವಾಮಿ ಮತ್ತಿತರರು ಧರ್ಮಸ್ಥಳ , ಕುಕ್ಕೆ ಸುಬ್ರಮಣ್ಯ, ಸೌತಡ್ಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.

ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಖ್ಯಾತ ವಕೀಲ ನಾರಾಯಣ್ ಸ್ವಾಮಿ ಜೊತೆಯಲ್ಲಿ ಶಿವಣ್ಣ , ಶೇಷ ಕುಮಾರ್, ನಿರಂಜನ್, ಮಂಜುನಾಥ್ ಹಾಗೂ ಚಾಲಕ ಯಾಶೀನ್ ಭಾಗಿಯಾಗಿದ್ದರು.

Related posts

ಅಳದಂಗಡಿ: ರಿಕ್ಷಾ ಮತ್ತು ಇನೋವಾ ಕಾರು ಮಧ್ಯೆ ಅಪಘಾತ ಪ್ರಯಾಣಿಕರಿಗೆ ಗಾಯ

Suddi Udaya

ಕಣಿಯೂರು ನಾರಾಯಣ ಕುಟುಂಬಕ್ಕೆ ಸಹಾಯಧನ

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ವೈದಾಧಿಕಾರಿ ಡಾ. ಚಂದ್ರಕಾಂತ್ ವರ್ಗಾವಣೆ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
error: Content is protected !!