25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯ ವತಿಯಿಂದ ದೀಪಾವಳಿ ಸಂಭ್ರಮ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಲಯನ್ಸ್ ಕ್ಲಬ್ ಬೆಳ್ತಂಗಡಿಯು ಜಂಟಿಯಾಗಿ ದೀಪಾವಳಿ ಹಬ್ಬ ತುಳುನಾಡ ತುಡರ್ ಪರ್ಬವನ್ನು ಜೆಸಿ ಭವನದಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮವನ್ನು ಲಯನ್ಸ್ ಕ್ಲಬ್ ಬೆಳ್ತಂಗಡಿಯ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿಯವರು ದೀಪ ಬೆಳಗಿಸುವ ಮುಖಾಂತರ ಉದ್ಘಾಟಿಸಿ, ಶುಭ ಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷರಾದ ರಂಜಿತ್ ಎಚ್ ಡಿ ಬಳoಜ ವಹಿಸಿದ್ದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ವಲಯ ಉಪಾಧ್ಯಕ್ಷರಾದ ಶಂಕರ್ ರಾವ್ ದೀಪದ ಹಬ್ಬದ ಮಹತ್ವವನ್ನು ತಿಳಿಸಿದರು. ಎರಡು ಪ್ರತಿಷ್ಠಿತ ಅಂತಾರಾಷ್ಟ್ರೀಯ ಸಂಸ್ಥೆಗಳು ಜಂಟಿಯಾಗಿ ಹಬ್ಬ ವನ್ನು ಆಚರಿಸುತ್ತಿರುವ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ವೇದಿಕೆಯಲ್ಲಿ ಲಯನ್ಸ್ ಕ್ಲಬ್ ನ ಕಾರ್ಯದರ್ಶಿಗಳಾದ ಕಿರಣ್ ಕುಮಾರ್ ಶೆಟ್ಟಿ, ಲೇಡಿ ಜೆಸಿ ಸಂಯೋಜಕರಾದ ಶ್ರುತಿ ರಂಜಿತ್, ಜೆಜೆಸಿ ಅಧ್ಯಕ್ಷರಾದ ಸಮನ್ವಿತ್ ಕುಮಾರ್, ಕಾರ್ಯಕ್ರಮದ ಸಂಯೋಜಕರಾದ ಜಯರಾಜ್ ಬಂಗೇರ ನಡಕ್ಕರ ಹಾಗೂ ಮಾಮಿತಾ ಸುಧೀರ್ ಉಪಸ್ಥಿತರಿದ್ದರು.

ಬಲಿಂದ್ರ ಪಾರ್ಧನದ ಮಹತ್ವವನ್ನು ಸಂಯೋಜಕರಾದ ಜಯರಾಜ್ ರವರು ಉಲ್ಲೇಖಿಸಿದರು. ನಂತರ ಎಲ್ಲರೂ ಸೇರಿ ದಾಂಡಿಯಾ ನೃತ್ಯ ಮಾಡಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಧ್ಯಕ್ಷರುಗಳು, ಪದಾಧಿಕಾರಿಗಳು ಸದಸ್ಯರುಗಳು ಉಪಸ್ಥಿತರಿದ್ದರು.

ಉಪಾಧ್ಯಕ್ಷೆ ಹೇಮಾವತಿ ಕೆ ಸ್ವಾಗತಿಸಿ , ಜೆಸಿ ವಾಣಿಯನ್ನು ರಕ್ಷಿತಾ ಶೆಟ್ಟಿ ಉದ್ಘೋಷಿಸಿದರು. ಲಯನ್ಸ್ ಕ್ಲಬ್ ನ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಧನ್ಯವಾದವಿತ್ತರು.

Related posts

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya

ಕುಕ್ಕೇಡಿ: ಶ್ರೀ ಶಾರಾದಾಂಬ ಮಹಿಳಾ ಭಜನಾ ಸಮಿತಿಯ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬಿಷಪ್ ರಿಗೆ ಲಯನ್ಸ್ ಕ್ಲಬ್ ನಿಂದ ಬೆಳ್ಳಿಹಬ್ಬ ವರ್ಷದ “ಗೌರವಾಭಿನಂದನೆ”

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!