23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

ಬೆಳ್ತಂಗಡಿ: 71ನೇ ಅಖಿಲ ಭಾರತ ಸಹಕಾರಿ ಸಪ್ತಾಹದ ಕಾರ್ಯಕ್ರಮದಂದು ಪ್ರತಿ ವರ್ಷದಂತೆ ಈ ವರ್ಷವೂ ದಕ್ಷಿಣ ಕನ್ನಡ ಹಾಲು ಒಕ್ಕೂಟವು ಕೆ.ಎಂ.ಎಫ್. ವ್ಯಾಪ್ತಿಯಲ್ಲಿಯೇ ಪ್ರಪ್ರಥಮವಾಗಿ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರನ್ನು ಕರ್ನಾಟಕ ಸರಕಾರದ ಸಹಕಾರ ಸಚಿವ ಕೆ. ಎನ್. ರಾಜಣ್ಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ಸಚಿವ ದಿನೇಶ್ ಗುಂಡುರಾವ್ ಮತ್ತು ಇತರ ಗಣ್ಯರ ಸಮಕ್ಷಮದಲ್ಲಿ ಬಿಡುಗಡೆಗೊಳಿಸಿದರು.

15ದಿನಗಳ ಜೀವಿತಾವಧಿಯನ್ನು ಹೊಂದಿರುವ ಈ ಉತ್ಪನ್ನದ ಸೇವನೆಯಿಂದ ಉತ್ತಮ ಜೀರ್ಣಕ್ರಿಯೆ, ರೋಗನಿರೋಧಕ ಶಕ್ತಿಯ ಸುಧಾರಣೆ, ಮೂಳೆಗಳ ಬೆಳವಣಿಗೆ, ತೂಕ ನಿರ್ವಹಣೆ, ಹೃದಯ ರಕ್ತನಾಳದ ಆರೋಗ್ಯ ವೃದ್ಧಿ, ರಕ್ತದೊತ್ತಡ ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಕಾರಿಯಾಗಿದ್ದು ಎಲ್ಲಾ ವಯೋಮಾನದವರು ಉಪಯೋಗಿಸಲು ಯೋಗ್ಯವಾಗಿದ್ದು ಗ್ರಾಹಕರು ಇದರ ಸದುಪಯೋಗವನ್ನು ಪಡದುಕೊಳ್ಳುವಂತೆ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿಯವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಒಕ್ಕೂಟದ ಉಪಾಧ್ಯಕ್ಷ ಎಸ್. ಬಿ. ಜಯರಾಮ ರೈ, ಒಕ್ಕೂಟದ ನಿರ್ದೇಶಕರುಗಳು, ವ್ಯವಸ್ಥಾಪಕ ನಿರ್ದೇಶಕ ವಿವೇಕ್ ಡಿ. ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು

Related posts

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

Suddi Udaya

ಗುರುವಾಯನಕೆರೆ ಕುಂಬಾರರ ಗುಡಿ ಕೈಗಾರಿಕ ಸಹಕಾರ ಸಂಘದ ಮುಂಗಾರು ಹಂಗಾಮ ಠೇವಣಿ ಯೋಜನೆಗಳ ಕರಪತ್ರ ಬಿಡುಗಡೆ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಜೆಸಿಐ ಕೊಕ್ಕಡ ಕಪಿಲಾ 2026ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿತೇಶ್ ಎಂ. ಸ್ಟ್ರೆಲ್ಲಾ, ಕಾರ್ಯದರ್ಶಿಯಾಗಿಜೋಯೆಲ್ ಪಿರೇರಾ ಆಯ್ಕೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಇದರ ಸಂಯೋಜಕಿಯಾಗಿ ಅಂಜನಾ ಆಯ್ಕೆ

Suddi Udaya
error: Content is protected !!