September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

ಧರ್ಮಸ್ಥಳ : ರಾಷ್ಟ್ರೀಯ ತುಳು ಗುಡಿಗಾರರ ಸಂಘ ದಕ್ಷಿಣ ಕನ್ನಡ ಜಿಲ್ಲೆ -ಉಡುಪಿ ಜಿಲ್ಲೆ ಕಟ್ಟದಬೈಲು ಧರ್ಮಸ್ಥಳ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ 2023-24 ಮತ್ತು ಕೆಸರು ಗದ್ದೆ ಕಾರ್ಯಕ್ರಮ ನ.17 ರಂದು ಶ್ರೀ ರಾಮಭಜನಾ ಮಂದಿರ ಕಟ್ಟದಬೈಲು ಇಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ರಾಷ್ಟ್ರೀಯ ತುಳು ಗುಡಿಗಾರ್ ಸಂಘದ ಅಧ್ಯಕ್ಷ ರವೀಂದ್ರ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ತುಳು ಗುಡಿಗಾರ್ ಸಂಘ ಉಪಾಧ್ಯಕ್ಷರಾದ ಮಂಜುನಾಥ ಗುಡಿಗಾರ್ ಕಟ್ಟದಬೈಲು, ಶಾಂತಿರಾಜ್ ಗುಡಿಗಾರ್ ಅಳದಂಗಡಿ, ಜೊತೆ ಕಾರ್ಯದರ್ಶಿ ಆದರ್ಶ ಗುಡಿಗಾರ್, ಕೋಶಾಧಿಕಾರಿ ಕವಿತಾ ರಾಜೇಂದ್ರ ಗುಡಿಗಾರ್ ಅಂತರಬೈಲು, ನಿರ್ದೇಶಕರಾದ ರಮೇಶ್ ಗುಡಿಗಾರ್ ಅಂತರಬೈಲು, ಉದಯ ಗುಡಿಗಾರ್, ಮುಂಬೈ, ಗಣೇಶ ಗುಡಿಗಾರ್ ನಾವೂರು, ದೇವಿಪ್ರಸಾದ್ ಎನ್. ಗುಡಿಗಾರ್ ಉಡುಪಿ, ಚಂದ್ರಶೇಖರ ಗುಡಿಗಾರ್ ಸವಣಾಲು, ಪ್ರಮೋದ್ ಗುಡಿಗಾರ್ ಉಡುಪಿ, ಸತ್ಯನಾರಾಯಣ ಗುಡಿಗಾರ್ ಅಂತರಬೈಲು, ವಿಶ್ವೇಶ್ ಗುಡಿಗಾರ್ ಅಂತರಬೈಲು ಉಪಸ್ಥಿತರಿದ್ದರು.

ಈ ವೇಳೆ ಮಕ್ಕಳಿಗೆ ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಸಂಜೆ ನಡೆದ ಸಮಾರೋಪದಲ್ಲಿ ಹಲವು ಗಣ್ಯರು ಭಾಗವಹಿಸಿ ಆಟೋಟ ಸ್ಪರ್ಧೆಯಲ್ಲಿ ಜಯಶಾಲಿಯಾದ ಎಲ್ಲಾ ಸ್ಪರ್ಧಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು..

ಈ ಸಂದರ್ಭದಲ್ಲಿ ರಾಷ್ಟ್ರೀಯ ತುಳು ಗುಡಿಗಾರರ ಸಂಘ ಸರ್ವ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಉಜಿರೆ : ಕೊಲೆ ಪ್ರಕರಣದ ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya

ವೇಣೂರು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ವಿಮ್ ನಿಯೋಗ

Suddi Udaya

ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಾಹಿತ್ಯ ಪರಿಷತ್ತು ಸಂಸ್ಥಾಪನಾ ದಿನಾಚರಣೆ ಮತ್ತು ದಿ.ಮಾಚಾರು ಗೋಪಾಲ ನಾಯ್ಕರ ಸಂಸ್ಮರಣೆ

Suddi Udaya

ಉಪ್ಪಿನಂಗಡಿ-ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪಂಚಕಲ್ಯಾಣ ಮಹೋತ್ಸವ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಮರೋಡಿ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!