23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

ಬೆಳ್ತಂಗಡಿ : ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿಯನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ನ.18 ರಂದು ಆಚರಿಸಲಾಯಿತು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ “ನಾನು” ಎಂಬ ಅಹಂ ನಮ್ಮಿಂದ ಹೋದಾಗ ಮಾತ್ರ ಭಗವಂತನನ್ನು ಕಂಡುಕೊಳ್ಳುವುದಕ್ಕೆ ಸಾಧ್ಯ. ಸಾತ್ವಿಕ ಬದುಕನ್ನು ಪೂರೈಸಿದರೆ ಮೋಕ್ಷವನ್ನು ಕಾಣಲು ಸಾಧ್ಯ. ಮೋಕ್ಷವನ್ನು ಕಾಣುವುದೇ ಮಾನವ ಜನ್ಮದ ಉದ್ದೇಶ. ಜನನ ಮರಣದ ಚಕ್ರದಿಂದ ಹೊರಗೆ ಬರುವುದಕ್ಕೆ ಕನಕದಾಸರಂತಹ ಸಂತರುಗಳು ದಾರಿ ತೋರಿಸಿದ್ದಾರೆ. ಭಕ್ತಿ ಪರಂಪರೆಯ ಶ್ರೇಷ್ಠರು ಕನಕದಾಸರು.

ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಕನಕದಾಸರ ಜೀವನ ಚರಿತ್ರೆಯ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಉಪ ತಹಸೀಲ್ದಾರ್ ಮಲ್ಲಪ್ಪ ನಡುಗಟ್ಟಿ, ಎ ಎಸ್ ಐ ದುರ್ಗಾಪ್ರಸಾದ್ ಉಪಸ್ಥಿತರಿದ್ದರು.

ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ನಿರೂಪಿಸಿದರು. ಪರಮೇಶ್ ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯನ್ನು ಹಾಡಿದರು.

Related posts

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ ಸಂಪನ್ನ

Suddi Udaya

ಕುತ್ರೋಟ್ಟು ನಿವಾಸಿ ಫಯಾಜ್ ಸ್ಥಳೀಯ ಮಹಿಳೆ ಜೊತೆ ನಾಪತ್ತೆ ಶಂಕೆ: ಫಯಾಜ್ ನ ಪತ್ನಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು -ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ರಾಜ್ಯ ಮಟ್ಟದ ಓಟ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ ಕ್ರೀಡಾ ಸಂಘದ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಕೆಂಪೇಗೌಡ ಜಯಂತಿ ಅಂಗವಾಗಿ ಚಿತ್ರಕಲಾ ಸ್ಪರ್ಧೆ: ಬೆಳ್ತಂಗಡಿ ಶ್ರೀ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ರಿತಿಕಾ ಶೆಣೈಗೆ ಪ್ರಶಸ್ತಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ 2023-24 ನೇ ಸಾಲಿನ ವಾರ್ಷಿಕ ವರದಿ ಬಿಡುಗಡೆ

Suddi Udaya
error: Content is protected !!