July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

ಬೆಳ್ತಂಗಡಿ : ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿಯನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ನ.18 ರಂದು ಆಚರಿಸಲಾಯಿತು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ “ನಾನು” ಎಂಬ ಅಹಂ ನಮ್ಮಿಂದ ಹೋದಾಗ ಮಾತ್ರ ಭಗವಂತನನ್ನು ಕಂಡುಕೊಳ್ಳುವುದಕ್ಕೆ ಸಾಧ್ಯ. ಸಾತ್ವಿಕ ಬದುಕನ್ನು ಪೂರೈಸಿದರೆ ಮೋಕ್ಷವನ್ನು ಕಾಣಲು ಸಾಧ್ಯ. ಮೋಕ್ಷವನ್ನು ಕಾಣುವುದೇ ಮಾನವ ಜನ್ಮದ ಉದ್ದೇಶ. ಜನನ ಮರಣದ ಚಕ್ರದಿಂದ ಹೊರಗೆ ಬರುವುದಕ್ಕೆ ಕನಕದಾಸರಂತಹ ಸಂತರುಗಳು ದಾರಿ ತೋರಿಸಿದ್ದಾರೆ. ಭಕ್ತಿ ಪರಂಪರೆಯ ಶ್ರೇಷ್ಠರು ಕನಕದಾಸರು.

ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಕನಕದಾಸರ ಜೀವನ ಚರಿತ್ರೆಯ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಉಪ ತಹಸೀಲ್ದಾರ್ ಮಲ್ಲಪ್ಪ ನಡುಗಟ್ಟಿ, ಎ ಎಸ್ ಐ ದುರ್ಗಾಪ್ರಸಾದ್ ಉಪಸ್ಥಿತರಿದ್ದರು.

ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ನಿರೂಪಿಸಿದರು. ಪರಮೇಶ್ ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯನ್ನು ಹಾಡಿದರು.

Related posts

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ರಾಜ್ಯಮಟ್ಟದ ಜನಪದ ಗೀತಗಾಯನದಲ್ಲಿ ವಾಣಿ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ

Suddi Udaya

ಎಸ್ ಡಿ ಎಂ ಕಾಲೇಜು ಬಿ.ವೋಕ್ ವಿಭಾಗದ ವಿದ್ಯಾರ್ಥಿಗಳಿಗೆ ಹೈಪರ್ ಲೋಕಲ್ ನ್ಯೂಸ್ ಮೀಡಿಯಾದ ಮಾಹಿತಿ ಕಾರ್ಯಗಾರ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಆಪರೇಷನ್ ಸಿಂದೂರ: ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!