25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

ಬೆಳ್ತಂಗಡಿ : ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿಯನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ನ.18 ರಂದು ಆಚರಿಸಲಾಯಿತು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ “ನಾನು” ಎಂಬ ಅಹಂ ನಮ್ಮಿಂದ ಹೋದಾಗ ಮಾತ್ರ ಭಗವಂತನನ್ನು ಕಂಡುಕೊಳ್ಳುವುದಕ್ಕೆ ಸಾಧ್ಯ. ಸಾತ್ವಿಕ ಬದುಕನ್ನು ಪೂರೈಸಿದರೆ ಮೋಕ್ಷವನ್ನು ಕಾಣಲು ಸಾಧ್ಯ. ಮೋಕ್ಷವನ್ನು ಕಾಣುವುದೇ ಮಾನವ ಜನ್ಮದ ಉದ್ದೇಶ. ಜನನ ಮರಣದ ಚಕ್ರದಿಂದ ಹೊರಗೆ ಬರುವುದಕ್ಕೆ ಕನಕದಾಸರಂತಹ ಸಂತರುಗಳು ದಾರಿ ತೋರಿಸಿದ್ದಾರೆ. ಭಕ್ತಿ ಪರಂಪರೆಯ ಶ್ರೇಷ್ಠರು ಕನಕದಾಸರು.

ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಕನಕದಾಸರ ಜೀವನ ಚರಿತ್ರೆಯ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಉಪ ತಹಸೀಲ್ದಾರ್ ಮಲ್ಲಪ್ಪ ನಡುಗಟ್ಟಿ, ಎ ಎಸ್ ಐ ದುರ್ಗಾಪ್ರಸಾದ್ ಉಪಸ್ಥಿತರಿದ್ದರು.

ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ನಿರೂಪಿಸಿದರು. ಪರಮೇಶ್ ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯನ್ನು ಹಾಡಿದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಎಸ್.ಡಿ.ಎಂ. ಪಪೂ ಕಾಲೇಜು : ಶೈಕ್ಷಣಿಕ ಅಧ್ಯಯನ ಪ್ರವಾಸ

Suddi Udaya

ರಸ್ತೆ ದುರಸ್ಥಿಗೆ ಆಗ್ರಹಿಸಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಣಾಧಿಕರಿಗೆ ಮನವಿ ಸಲ್ಲಿಸಿದ ಕುವೆಟ್ಟು ಪಂಚಾಯತ್ ಸದಸ್ಯರು

Suddi Udaya

ಮುಂಡಾಜೆ ಫ್ರೆಂಡ್ಸ್ ಅಮೆಚೂರ್ ಅಸೋಸಿಯೇಶನ್ ವತಿಯಿಂದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Suddi Udaya

ಉಪ್ಪಿನಂಗಡಿ ಸ.ಪ.ಪೂ. ಕಾಲೇಜಿನ ಪ್ರೌಢಶಾಲಾ ವಿಭಾಗದ ಹಿರಿಯ ವಿದ್ಯಾರ್ಥಿ ಸಂಘದ ರಚನಾ ಸಭೆ

Suddi Udaya
error: Content is protected !!