April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

ಬೆಳ್ತಂಗಡಿ: ವಕೀಲರು ವೃತ್ತಿಯಲ್ಲಿ ಪ್ರಕರಣಗಳ ಬಗ್ಗೆ ಸತತ ಪರಿಶ್ರಮ ಮತ್ತು ಅದ್ಯಯನ ನಡೆಸಿ ಕೆಲಸ ನಿರ್ವಹಿಸಿದಲ್ಲಿ ಕಕ್ಷಿಗಾರರಿಗೆ ನ್ಯಾಯ ದೊರಕುವ ಜೊತೆಗೆ ವೃತ್ತಿಯಲ್ಲಿ ಯಶಸ್ಸು ಕಾಣಲು ಸಾದ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ರಾಜೇಶ್‌ರೈ, ಕೈರಂಗಳ ಅಭಿಪ್ರಾಯಪಟ್ಟಿದ್ದಾರೆ.

ಅವರು ನ. 16 ರಂದು ಬೆಳ್ತಂಗಡಿ ವಕೀಲರ ಸಂಘಕ್ಕೆ ಭೇಟಿ ನೀಡಿ ವಕೀಲರನ್ನುದ್ದೇಶಿ ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ವಕೀಲರುಗಳು ಅಧ್ಯಯನಶೀಲತೆಯ ಮೂಲಕ ಪಾಂಡಿತ್ಯ ಹೊಂದಿದ್ದು ನ್ಯಾಯಂಗದಲ್ಲಿ ತಮ್ಮದೇ ಆದ ಗೌರವವನ್ನು ಹೊಂದಿದ್ದಾರೆ ಎಂದವರು ಈ ಸಂಧರ್ಭದಲ್ಲಿ ಹೇಳಿದರು.

ಯುವ ವಕೀಲರು ನ್ಯಾಯಲಯದ ಕಲಾಪಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಹಿರಿಯ ನ್ಯಾಯವಾದಿಗಳು ಪ್ರಕರಣ ನಡೆಸುವ ಸಂದರ್ಭವನ್ನು ಆಲಿಸುವ ಮೂಲಕ ಸಮಯದ ಸದ್ಬಳಕೆ ಮಾಡಿಕೊಳ್ಳಬೇಕೆಂದು ಅವರು ಯುವ ವಕೀಲರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ 6೦ ವರ್ಷ ಹಳೆಯದಾದ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣವನ್ನು ವೀಕ್ಷಿಸಿ ಹೊಸ ಕಟ್ಟಡ ಮಂಜೂರಾತಿಗಾಗಿ ಸರಕಾರದ ಮಟ್ಟದಲ್ಲಿ ಒತ್ತಡ ತರಲು ವಕೀಲರ ಸಂಘದ ಜೊತೆ ಕೈ ಜೋಡಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ ಸ್ವಾಗತಿಸಿ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಎ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಕುವೆಟ್ಟು: ಶಕ್ತಿನಗರದ ಬಳಿ ಪಾದಾಚಾರಿಗೆ ಬೈಕ್ ಡಿಕ್ಕಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಫೆ.12-16: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya
error: Content is protected !!