25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ B ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ವಿಜಯ ಆರ್ ರವರ ಅಧ್ಯಕ್ಷತೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಸಮೃದ್ಧಿ ಬಿ ಸಂಘದ ಸದಸ್ಯರು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಅಶೋಕ್ ಕುಮಾರ್ ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಮೀನಾರವರು ಮಂಡಿಸಿದರು,
ಯೋಜನೆಯ ಕೃಷಿ ಅಧಿಕಾರಿಯಾದ ರಾಮಕುಮಾರ್ ಸಂಘಟನಾತ್ಮಕವಾಗಿ ಸಂಘವನ್ನು ಕಟ್ಟಿಕೊಂಡು ಒಕ್ಕೂಟದ ವ್ಯವಸ್ಥೆಗೆ ತಂದು ಸಂಘದ ಸಂಪೂರ್ಣ ಬೆಳವಣಿಗೆಗೆ ಒಕ್ಕೂಟವು ನಿರಂತರವಾಗಿ ಸಹಕಾರವನ್ನು ನೀಡಿ ಯೋಜನೆಯ ಎಲ್ಲ ಸೇವೆಗಳನ್ನು ಸದಸ್ಯರಿಗೆ ತಲುಪಿಸಲು ಒಕ್ಕೂಟವು ಯೋಜನೆಯ ಕೊಂಡಿಯಾಗಿ ಸಂಘಕ್ಕೆ ಸೇವೆಯನ್ನು ನೀಡುತ್ತಿದೆ ಎಂದರು.


ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸದಸ್ಯರಿಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.
ವಲಯ ಮೇಲ್ವಿಚಾರಕರು ಜನಾರ್ದನ್, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ, ನಿಕಟಪೂರ್ವ ಅಧ್ಯಕ್ಷರು ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು. ರವಿ ಎನ್ ಸ್ವಾಗತಿಸಿ, ವಸಂತ ವಂದಿಸಿದರು.

Related posts

ಬೆಳಾಲು: ದಿ| ದಿನೇಶ್ ಪೂಜಾರಿ ಉಪ್ಪಾರು ಸ್ಮರಣಾರ್ಥವಾಗಿ ನಿರ್ಮಾಣಗೊಂಡಿರುವ ಅನಂತೋಡಿ ವೃತ್ತ ಲೋಕಾರ್ಪಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಅಭಿನಂದನಾ ಕಾರ್ಯಕ್ರಮ: ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ: ಬಿಜೆಪಿ ಗೆಲುವಿಗೆ ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ ಹಾಗೂ ಸುಜ್ಞಾನ ಬಯಲು ರಂಗಮಂದಿರ ಉದ್ಘಾಟನೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಬೆಂಗಳೂರು ವಿಶ್ವವಿದ್ಯಾನಿಲಯ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಂ.ಆರ್. ಶೇಕ್ ಲತೀಫ್ ನೇಮಕ

Suddi Udaya
error: Content is protected !!