25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

ಬೆಳ್ತಂಗಡಿ : ಖ್ಯಾತ ವಕೀಲ ಬೆಂಗಳೂರಿನ ನಾರಾಯಣ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನ.18 ರಂದು ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಮುತ್ತಪ್ಪ ರೈ ಮೃತಪಟ್ಟ ಬಳಿಕ ಎರಡನೇ ಪತ್ನಿ ಮತ್ತು ಮಕ್ಕಳ ವಿರುದ್ಧ ಆಸ್ತಿ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು‌. ವರ್ಷಗಳ ಬಳಿಕ ವಕೀಲ ನಾರಾಯಣ ಸ್ವಾಮಿ ಮಧ್ಯಸ್ಥಿಕೆ ನಡೆಸಿ ಎರಡನೇ ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ಆಸ್ತಿ ವಿಚಾರದಲ್ಲಿ ಎರಡನೇ ಪತ್ನಿಗೆ ಸುಮಾರು 100 ಕೋಟಿ ರೂಪಾಯಿ ಪಾಲು ಮಾಡಿಸಿ ಕೋರ್ಟ್ ಪ್ರಕರಣ ರಾಜಿಯಲ್ಲಿ ಮುಗಿಸಿದ್ದರು. ಈ ಬಳಿಕ ನಾರಾಯಣ ಸ್ವಾಮಿ ಮತ್ತಿತರರು ಧರ್ಮಸ್ಥಳ , ಕುಕ್ಕೆ ಸುಬ್ರಮಣ್ಯ, ಸೌತಡ್ಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.

ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಖ್ಯಾತ ವಕೀಲ ನಾರಾಯಣ್ ಸ್ವಾಮಿ ಜೊತೆಯಲ್ಲಿ ಶಿವಣ್ಣ , ಶೇಷ ಕುಮಾರ್, ನಿರಂಜನ್, ಮಂಜುನಾಥ್ ಹಾಗೂ ಚಾಲಕ ಯಾಶೀನ್ ಭಾಗಿಯಾಗಿದ್ದರು.

Related posts

ಹೊಸಂಗಡಿ ಹಿಂದೂ ರುದ್ರ ಭೂಮಿಯಲ್ಲಿ ಸಾಮಾಜಿಕ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

Suddi Udaya

ಮಲೆಬೆಟ್ಟು ಹಾ.ಉ. ಸಂಘದ ಆಡಳಿತ ಮಂಡಳಿಯನ್ನುವಜಾಗೊಳಿಸಿ ನೀಡಿದ ಆದೇಶ ರದ್ದು: ಮತ್ತೆ ಅಧಿಕಾರದ ಗದ್ದುಗೆಗೆ ಏರಿದ ಪ್ರಮೋದ್ ಕುಮಾರ್ ಅಧ್ಯಕ್ಷತೆಯ ಆಡಳಿತ ಮಂಡಳಿ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಭಗವತಿ ದೇವಸ್ಥಾನದಲ್ಲಿ ಧಾರ್ಮಿಕ ಸಭೆ ಆರಂಭ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya
error: Content is protected !!