September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಖ್ಯಾತ ವಕೀಲ ನಾರಾಯಣ ಸ್ವಾಮಿ ಭೇಟಿ

ಬೆಳ್ತಂಗಡಿ : ಖ್ಯಾತ ವಕೀಲ ಬೆಂಗಳೂರಿನ ನಾರಾಯಣ ಸ್ವಾಮಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನ.18 ರಂದು ಬೆಳಗ್ಗೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಮುತ್ತಪ್ಪ ರೈ ಮೃತಪಟ್ಟ ಬಳಿಕ ಎರಡನೇ ಪತ್ನಿ ಮತ್ತು ಮಕ್ಕಳ ವಿರುದ್ಧ ಆಸ್ತಿ ವಿಚಾರದಲ್ಲಿ ಕೋರ್ಟ್ ಮೆಟ್ಟಿಲೇರಿದ್ದರು‌. ವರ್ಷಗಳ ಬಳಿಕ ವಕೀಲ ನಾರಾಯಣ ಸ್ವಾಮಿ ಮಧ್ಯಸ್ಥಿಕೆ ನಡೆಸಿ ಎರಡನೇ ಪತ್ನಿ ಮತ್ತು ಇಬ್ಬರು ಮಕ್ಕಳ ಜೊತೆ ಆಸ್ತಿ ವಿಚಾರದಲ್ಲಿ ಎರಡನೇ ಪತ್ನಿಗೆ ಸುಮಾರು 100 ಕೋಟಿ ರೂಪಾಯಿ ಪಾಲು ಮಾಡಿಸಿ ಕೋರ್ಟ್ ಪ್ರಕರಣ ರಾಜಿಯಲ್ಲಿ ಮುಗಿಸಿದ್ದರು. ಈ ಬಳಿಕ ನಾರಾಯಣ ಸ್ವಾಮಿ ಮತ್ತಿತರರು ಧರ್ಮಸ್ಥಳ , ಕುಕ್ಕೆ ಸುಬ್ರಮಣ್ಯ, ಸೌತಡ್ಕ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.

ದರ್ಶನ ಬಳಿಕ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಖ್ಯಾತ ವಕೀಲ ನಾರಾಯಣ್ ಸ್ವಾಮಿ ಜೊತೆಯಲ್ಲಿ ಶಿವಣ್ಣ , ಶೇಷ ಕುಮಾರ್, ನಿರಂಜನ್, ಮಂಜುನಾಥ್ ಹಾಗೂ ಚಾಲಕ ಯಾಶೀನ್ ಭಾಗಿಯಾಗಿದ್ದರು.

Related posts

ತೆಕ್ಕಾರು: ಸರಳಿಕಟ್ಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಮಹಮ್ಮದ್ ಫಯಾಜ್ ರವರಿಂದ ಲ್ಯಾಪ್ ಟಾಪ್ ಕೊಡುಗೆ

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ವಿವಿಧ ಸಮಿತಿಯಿಂದ ಸತ್ಯ ನಾರಾಯಣ ಪೂಜೆ ಮತ್ತು ಪದಗ್ರಹಣ ಕಾರ್ಯಕ್ರಮ

Suddi Udaya

ಸ್ಪಂದನಾ ಸೇವಾ ಸಂಘದ ಯೋಜನೆಯಿಂದ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya
error: Content is protected !!