25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಿಂದ ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

ಬೆಳ್ತಂಗಡಿ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ನೀಡುವ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿಗೆ ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಸಮಾಜ ಸೇವಕ,ಪ್ರಸಿದ್ದ ಉದ್ಯಮಿ ಮೋಹನ್ ಕುಮಾರ್ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಉಜಿರೆ ಇವರಿಗೆ ಪ್ರದಾನ ಮಾಡಲಾಯಿತು.

ಜಿ.ಪಂ ಮಾಜಿ ಉಪಾಧ್ಯಕ್ಷ, ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರ ನೇತೃತ್ವದಲ್ಲಿ ಪುಂಜಾಲಕಟ್ಟೆಯಲ್ಲಿ ನ. 17 ರಂದು 40 ನೇ ವರ್ಷದ ಹೊನಲು ಬೆಳಕಿನ ಸ್ವಸ್ತಿಕ್ ಇಂಡಿಯಾ ಕಪ್ ಗೋಲ್ಡ್ ಮೆಡಲ್ ಕಬಡ್ಡಿ ಪಂದ್ಯಾವಳಿಯ ಸಭಾ ವೇದಿಕೆಯಲ್ಲಿ ಪ್ರಶಸ್ತಿ ನೀಡಲಾಯಿತು.

ಮೋಹನ್ ಕುಮಾರ್ ಅವರು ಹಲವಾರು ಸಮಾಜಮುಖಿ ಕೆಲಸ ಕಾರ್ಯಗಳನ್ನು ಹಮ್ಮಿಕೊಂಡಿದ್ದಾರೆ. ಬದುಕು ಕಟ್ಟೋಣ ಬನ್ನಿ ತಂಡದ ಮುಖೇನಾ ನೂರಾರು ಜನಪರ ಕಾರ್ಯಕ್ರಮಗಳು ಅನುಷ್ಠಾನಗೊಂಡಿದೆ.ಇಂತಹ ಅನನ್ಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ಈ ಸಂದರ್ಭದಲ್ಲಿ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ, ದಿನೇಶ್ ಯುಪ್ಲಸ್ ಉಜಿರೆ, ಪ್ರಾನ್ಸಿಸ್, ಪಂದ್ಯಾಟದ ಸಂಚಾಲಕ ರಾಜೇಶ್ ಪಿ. ಪುಂಜಾಲಕಟ್ಟೆ, ಕ್ಲಬ್‌ನ ಗೌರವಾಧ್ಯಕ್ಷ ಅಬ್ದುಲ್ ಪಿ., ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ, ಕಾರ್‍ಯದರ್ಶಿ ಜಯರಾಜ್ ಅತ್ತಾಜೆ, ಪಂದ್ಯಾಟದ ಸಹ-ಸಂಚಾಲಕರು ಅಬ್ದುಲ್ ಹಮೀದ್ ಮಲ್ಪೆ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!