25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

ಬಾರ್ಯ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ, ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮಂಗಳೂರು, ಬೆಳ್ತಂಗಡಿ ತಾಲೂಕು ಸಹಕಾರಿ ಯೂನಿಯನ್, ಬೆಳ್ತಂಗಡಿ ಬೆಳ್ತಂಗಡಿ ತಾಲೂಕಿನ ಎಲ್ಲಾ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಗಳು ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘಗಳು, ತಾಲೂಕಿನ ಇತರ ಎಲ್ಲಾ ಸಹಕಾರಿ ಸಂಘಗಳ ಸಹಕಾರ-ಸಹಭಾಗಿ ತ್ವದಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಮತ್ತು ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘ ಇವರ ನೇತೃತ್ವದಲ್ಲಿ 71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024, ತಾಲೂಕು ಮಟ್ಟದ ಸಹಕಾರ ಸಪ್ತಾಹ ಸಮಾರಂಭ ಮತ್ತು ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವುದು ಇದರ ಬಗ್ಗೆ ವಿಚಾರಗೋಷ್ಠಿ ನ.18ರಂದು ಸಹಕಾರ ರತ್ನ ದಿ|ನಿರಂಜನ್ ಭಾವಂತಬೆಟ್ಟು ವೇದಿಕೆ, ಬಾರ್ಯದಲ್ಲಿ ಅದ್ದೂರಿಯಾಗಿ ಆರಂಭಗೊಂಡಿತು.

ಬೆಳಿಗ್ಗೆ ಧ್ವಜಾರೋಹಣವನ್ನು ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ ನೆರವೇರಿಸಿದರು.
ನಂತರ ಹಾಲು ಉತ್ಪಾದಕರ ಸಹಕಾರಿ ಸಂಘ ಕಲ್ಲೇರಿ ತಣ್ಣೀರುಪಂತದಿಂದ ಆರಂಭಗೊಂಡ ಸಹಕಾರಿ ಮೆರವಣಿಗೆಗೆ, ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಗೊಟ್ಟು ಚಾಲನೆ ನೀಡಿದರು.

ಬಾಯ೯ದ ಸಹಕಾರ ರತ್ನ ದಿ| ನಿರಂಜನ್ ಬಾವಂತಬೆಟ್ಟು ವೇದಿಕೆಯಲ್ಲಿ ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ರೈ ಪಿ. ಇವರ ಅಧ್ಯಕ್ಷತೆಯಲ್ಲಿ ನಡೆದ ತಾಲೂಕು ಮಟ್ಟದ ಸಹಕಾರ ಸಪ್ತಾಹವನ್ನು ಶಾಸಕ ಹರೀಶ್ ಪೂಂಜ ಅವರು
ದೀಪ ಬೆಳಗಿಸಿ ಉದ್ಘಾಟಿಸಿದರು.


ಮುಖ್ಯ ಅತಿಥಿಗಳಾಗಿ ಸುಚರಿತ ಶೆಟ್ಟಿ ಅಧ್ಯಕ್ಷರು, ದ.ಕ. ಹಾಲು ಉತ್ಪಾದಕರ ಒಕ್ಕೂಟ, ಕುಶಾಲಪ್ಪ ಗೌಡ ಪೂವಾಜೆ ನಿರ್ದೇಶಕರು, ದ.ಕ.ಜಿ. ಕೇಂದ್ರ ಸಹಕಾರಿ ಬ್ಯಾಂಕ್, ಪದ್ಮನಾಭ ಅರ್ಕಜೆ ನಿರ್ದೇಶಕರು, ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ, ಶ್ರೀಮತಿ ಸಾವಿತ್ರಿ ರೈ ನಿರ್ದೇಶಕರು, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ರಮೇಶ್ ಹೆಚ್. ಎನ್. ಸಹಕಾರ ಸಂಘಗಳ ಉಪನಿಬಂಧಕರು, ಎಸ್.ಎಂ. ರಘು, ಸಹಕಾರ ಸಂಘಗಳ ಸಹಾಯಕ ನಿಬಂಧಕರು, ಪುತ್ತೂರು, ಸತೀಶ್ ಕೆ., ಅಧ್ಯಕ್ಷರು, ತಾಲೂಕು ಸಹಕಾರಿ ಯೂನಿಯನ್ ಬೆಳ್ತಂಗಡಿ, ಜಯರಾಜ ಹೆಗ್ಡೆ ಪಿ., ಅಧ್ಯಕ್ಷರು, ಹಾಲು ಉತ್ಪಾದಕರ ಸಹಕಾರಿ ಸಂಘ, ತಣ್ಣೀರುಪಂತ, ಉಸ್ಮಾನ್ ಪಿ.ಕೆ., ಅಧ್ಯಕ್ಷರು, ಗ್ರಾ.ಪಂ. ಬಾರ್ಯ ಭಾಗವಹಿಸಿದ್ದರು.


ಸಂಪನ್ಮೂಲ ವ್ಯಕ್ತಿ ಶ್ರೀ ಧವಳ ಕಾಲೇಜು, ಮೂಡಬಿದ್ರೆಯ ಅಸಿಸ್ಟೆಂಟ್ ಪ್ರೋಫೆಸರ್ ಸಂತೋಷ್ ಶೆಟ್ಟಿ ಅವರು ‘ಸಹಕಾರ ಸಂಸ್ಥೆಗಳ ನಡುವೆ ಸಹಕಾರವನ್ನು ಬಲಪಡಿಸುವುದು ವಿಷಯದಲ್ಲಿ ಮಾಹಿತಿ ನೀಡಿದರು.
ಬಾಯ೯ ಸಹಕಾರಿ ಸಂಘದ ಉಪಾಧ್ಯಕ್ಷ ಶಿವರಾಮ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಗೌಡ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಯರಾಜ್ ಹೆಗ್ಡೆ, ಕಾಯ೯ದಶಿ೯ ಜಯರಾಜ್ ಹಾಗೂ ಎರಡು ಸಂಘಗಳ ನಿದೇ೯ಶಕರು, ಸದಸ್ಯರು ಉಪಸ್ಥಿತರಿದ್ದರು.


ಪುಷ್ಯ ಪ್ರಸನ್ನ ಬೊಳ್ತಡ್ಕ ಇವರ ಪ್ರಾಥ೯ನೆ ಬಳಿಕ ಬಾಯ೯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ರಾಜೇಶ್ ರೈ ಸ್ವಾಗತಿಸಿದರು. ಗಣೇಶ್ ಪಿಲಿಕಲ್ಲು ಕಾಯ೯ಕ್ರಮ ನಿರೂಪಿಸಿದರು.

Related posts

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಬಂದಾರು: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿಕ್ಕಿ: ದ್ವಿಚಕ್ರ ವಾಹನ ಸವಾರ ಸಾವು, ಮಹಿಳೆ ಗಂಭೀರ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಜೂ 11 ರವರೆಗೆ ದ.ಕ. ಸಹಿತ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ಮುನ್ನೆಚ್ಚರಿಕೆ ವಹಿಸಲು ಡಿಸಿ ರವಿಕುಮಾರ್ ಸೂಚನೆ

Suddi Udaya
error: Content is protected !!