July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

ಬೆಳ್ತಂಗಡಿ: ಸಮಾಜವನ್ನು ಸನ್ಮಾರ್ಗದ ಕಡೆಗೆ ಕೊಂಡು ಹೋಗುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಯೋಜನೆಯ ಮೂಲಕ ಮಾಡುತ್ತಿದ್ದಾರೆ. ಯೋಜನೆಯಿಂದಾಗಿ ಇಂದು ಮಹತ್ತರ ಪರಿವರ್ತನೆಯಾಗಿದ್ದು ಕಟ್ಟಕಡೆಯ ಕುಟುಂಬವೂ ಮುಖ್ಯವಾಹಿನಿಗೆ ಬರುವಂತಾಗಿದೆ ಎಂದು ಉಡುಪಿ ಪ್ರಾದೇಶಿಕ ವಿಭಾಗದ ನಿರ್ದೇಶಕ ದುಗ್ಗೇ ಗೌಡ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯ ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿದರು.

ಗುಂಪಿನ ಮೂಲಕ ಉಳಿತಾಯದ ಮನೋಭಾವನೆ ಬೆಳೆದಿದೆ, ಗುಂಪುಗಳು ಮಿನಿ ಬ್ಯಾಂಕ್ ಗಳಾಗಿ ಪರಿವರ್ತನೆಯಾಗಿದೆ. ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಯೋಜನೆಯು ಕೈ ಜೋಡಿಸಿದೆ. ಬಡವರನ್ನು ಗುರುತಿಸಿ ಅವರಿಗೆ ಆರ್ಥಿಕ ಚೈತನ್ಯ ನೀಡುವ ಕೆಲಸವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಾಡುತ್ತಿದೆ ಎಂದವರು ಉದಾಹರಣೆ ಸಹಿತ ವಿವರಿಸಿದರು.

ರೈತ ಬಂಧು ಆಹಾರೋದ್ಯಮ ಪ್ರೈ. ಲಿ ಮಾರುತಿ ಪುರ ಮಾಲಕ ಶಿವ ಶಂಕರ್ ನಾಯಕ್ ಉದ್ಘಾಟನೆ ನೆರವೇರಿಸಿ ಮಾತನಾಡುತ್ತಾ, ತಾಲೂಕಿನಲ್ಲಿ ಯೋಜನೆಯ ಆರಂಭದ ದಿನಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ಸಿಕ್ಕಿದ ಪರಿಣಾಮ ರೈತರ ಅಭಿವೃದ್ಧಿ ಯೊಂದಿಗೆ ಗ್ರಾಮದ ಅಭಿವೃದ್ಧಿ ಯಾಗಿದೆ ಎಂದು ಸ್ಮರಿಸಿದರು.

ಅಧ್ಯಕ್ಷತೆಯನ್ನು ರಾಮಣ್ಣ ಗೌಡ ವಲಯ ಅದ್ಯಕ್ಷರು ತಣ್ಣೀರು ಪಂಥ ವಲಯ ವಹಿಸಿದ್ದರು.
ವೇದಿಕೆಯಲ್ಲಿ ತಾಲೂಕು ಜನ ಜಾಗೃತಿ ವೇದಿಕೆ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಜಗದೀಶ್ ಶೆಟ್ಟಿ ಮೈರಾ, ಬಾವಂತಬೆಟ್ಟು ಕಲ್ಲೇರಿ ರಾಜೇಶ್ ಜೈನ್, ನವಚೇತನ ತೋಟಗಾರಿಕಾ ರೈತ ಉತ್ಪಾದಕರ ಕಂಪನಿ ಕಲ್ಲೇರಿ ಲಿಂಗಪ್ಪ ನಾಯ್ಕ, ಶ್ರೀರಾಮ ಶಾಲೆ ಉಪ್ಪಿಂಗಡಿ ಅಧ್ಯಕ್ಷ ಸುನಿಲ್ ಅಣವು , ತಣ್ಣೀರುಪಂಥ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ, ಕೃಷಿಕ ಪ್ರವೀಣ್ ರೈ ಕುಪ್ಪೆಟ್ಟಿ, ತಣ್ಣೀರುಪಂಥ ಗ್ರಾಮ ಪಂಚಾಯತ್ ಸದಸ್ಯ ಸಾಮ್ರಾಟ್ ಕರ್ಕೇರ, ಕಲ್ಲೇರಿ ಒಕ್ಕೂಟದ ನೂತನ ಅಧ್ಯಕ್ಷ ರವೀಂದ್ರ, ಕರಾಯ ಒಕ್ಕೂಟದ ನೂತನ ಅಧ್ಯಕ್ಷ ರಾಜಶೇಖರ ರೈ, ನಿಕಟ ಪೂರ್ವ ಅಧ್ಯಕ್ಷ ರಘರಾಮ ಶೆಟ್ಟಿ, ಕುಪ್ಪೆಟ್ಟಿ ಒಕ್ಕೂಟದ ನೂತನ ಅಧ್ಯಕ್ಷ ಡೀಕಯ್ಯ ಗೌಡ ಉಪಸ್ಥಿತರಿದ್ದರು.

ತಾಲೂಕು ಯೋಜನಾಧಿಕಾರಿ ದಯಾನಂದ ಪೂಜಾರಿ ಸ್ವಾಗತಿಸಿದರು. ವಲಯ ಮೇಲ್ವಿಚಾರಕ ಗುಣಕರ್ ನಿರೂಪಿಸಿದರು. ಕರಾಯ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸುಜಾತಾ ವರದಿ ಮಂಡಿಸಿದರು. ಸೇವಾ ಪ್ರತಿನಿಧಿಗಳಾದ ಸಂದ್ಯಾ, ವೇದಾವತಿ ಹಾಜರಿದ್ದರು.

Related posts

ಕುವೆಟ್ಟು ಗ್ರಾಮ ಪಂಚಾಯತ್ ಗ್ರಾಮ ಸಭೆಯಲ್ಲಿ ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಚಾರ್ಮಾಡಿ ಪ್ರದೇಶದಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆಗಳು

Suddi Udaya

ಸೇವಾ ನಿವೃತ್ತಿ ಅಂಗವಾಗಿ ಉಷಾ ವಿ. ರವರಿಗೆ ಬೀಳ್ಕೊಡುಗೆ

Suddi Udaya

ನಿಡ್ಲೆ: ಲಿಲ್ಲಿ ಡಿಸೋಜಾ ನಿಧನ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಕ್ರಿಸ್ಮಸ್ ಸಂಭ್ರಮಾಚರಣೆ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!