25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

ಧರ್ಮಸ್ಥಳ : ರಾಷ್ಟ್ರೀಯ ತುಳು ಗುಡಿಗಾರರ ಸಂಘ ದಕ್ಷಿಣ ಕನ್ನಡ ಜಿಲ್ಲೆ -ಉಡುಪಿ ಜಿಲ್ಲೆ ಕಟ್ಟದಬೈಲು ಧರ್ಮಸ್ಥಳ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ 2023-24 ಮತ್ತು ಕೆಸರು ಗದ್ದೆ ಕಾರ್ಯಕ್ರಮ ನ.17 ರಂದು ಶ್ರೀ ರಾಮಭಜನಾ ಮಂದಿರ ಕಟ್ಟದಬೈಲು ಇಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ರಾಷ್ಟ್ರೀಯ ತುಳು ಗುಡಿಗಾರ್ ಸಂಘದ ಅಧ್ಯಕ್ಷ ರವೀಂದ್ರ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ತುಳು ಗುಡಿಗಾರ್ ಸಂಘ ಉಪಾಧ್ಯಕ್ಷರಾದ ಮಂಜುನಾಥ ಗುಡಿಗಾರ್ ಕಟ್ಟದಬೈಲು, ಶಾಂತಿರಾಜ್ ಗುಡಿಗಾರ್ ಅಳದಂಗಡಿ, ಜೊತೆ ಕಾರ್ಯದರ್ಶಿ ಆದರ್ಶ ಗುಡಿಗಾರ್, ಕೋಶಾಧಿಕಾರಿ ಕವಿತಾ ರಾಜೇಂದ್ರ ಗುಡಿಗಾರ್ ಅಂತರಬೈಲು, ನಿರ್ದೇಶಕರಾದ ರಮೇಶ್ ಗುಡಿಗಾರ್ ಅಂತರಬೈಲು, ಉದಯ ಗುಡಿಗಾರ್, ಮುಂಬೈ, ಗಣೇಶ ಗುಡಿಗಾರ್ ನಾವೂರು, ದೇವಿಪ್ರಸಾದ್ ಎನ್. ಗುಡಿಗಾರ್ ಉಡುಪಿ, ಚಂದ್ರಶೇಖರ ಗುಡಿಗಾರ್ ಸವಣಾಲು, ಪ್ರಮೋದ್ ಗುಡಿಗಾರ್ ಉಡುಪಿ, ಸತ್ಯನಾರಾಯಣ ಗುಡಿಗಾರ್ ಅಂತರಬೈಲು, ವಿಶ್ವೇಶ್ ಗುಡಿಗಾರ್ ಅಂತರಬೈಲು ಉಪಸ್ಥಿತರಿದ್ದರು.

ಈ ವೇಳೆ ಮಕ್ಕಳಿಗೆ ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಸಂಜೆ ನಡೆದ ಸಮಾರೋಪದಲ್ಲಿ ಹಲವು ಗಣ್ಯರು ಭಾಗವಹಿಸಿ ಆಟೋಟ ಸ್ಪರ್ಧೆಯಲ್ಲಿ ಜಯಶಾಲಿಯಾದ ಎಲ್ಲಾ ಸ್ಪರ್ಧಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು..

ಈ ಸಂದರ್ಭದಲ್ಲಿ ರಾಷ್ಟ್ರೀಯ ತುಳು ಗುಡಿಗಾರರ ಸಂಘ ಸರ್ವ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya

ಅ.28: ಕುತ್ಲೂರು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಸಮಗ್ರ ರಕ್ಷಣಾ ಯೋಜನೆ ಅಪಘಾತ ವಿಮಾ ಮೇಳ’

Suddi Udaya

ನಾವೂರು ವ್ಯಾಪ್ತಿಯಲ್ಲಿ 20 ಕ್ಕೂ ಮಿಕ್ಕಿ ವಿದ್ಯುತ್ ಕಂಬಗಳು ಧರಾಶಾಹಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
error: Content is protected !!