September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

ಧರ್ಮಸ್ಥಳ : ರಾಷ್ಟ್ರೀಯ ತುಳು ಗುಡಿಗಾರರ ಸಂಘ ದಕ್ಷಿಣ ಕನ್ನಡ ಜಿಲ್ಲೆ -ಉಡುಪಿ ಜಿಲ್ಲೆ ಕಟ್ಟದಬೈಲು ಧರ್ಮಸ್ಥಳ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ 2023-24 ಮತ್ತು ಕೆಸರು ಗದ್ದೆ ಕಾರ್ಯಕ್ರಮ ನ.17 ರಂದು ಶ್ರೀ ರಾಮಭಜನಾ ಮಂದಿರ ಕಟ್ಟದಬೈಲು ಇಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ರಾಷ್ಟ್ರೀಯ ತುಳು ಗುಡಿಗಾರ್ ಸಂಘದ ಅಧ್ಯಕ್ಷ ರವೀಂದ್ರ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ತುಳು ಗುಡಿಗಾರ್ ಸಂಘ ಉಪಾಧ್ಯಕ್ಷರಾದ ಮಂಜುನಾಥ ಗುಡಿಗಾರ್ ಕಟ್ಟದಬೈಲು, ಶಾಂತಿರಾಜ್ ಗುಡಿಗಾರ್ ಅಳದಂಗಡಿ, ಜೊತೆ ಕಾರ್ಯದರ್ಶಿ ಆದರ್ಶ ಗುಡಿಗಾರ್, ಕೋಶಾಧಿಕಾರಿ ಕವಿತಾ ರಾಜೇಂದ್ರ ಗುಡಿಗಾರ್ ಅಂತರಬೈಲು, ನಿರ್ದೇಶಕರಾದ ರಮೇಶ್ ಗುಡಿಗಾರ್ ಅಂತರಬೈಲು, ಉದಯ ಗುಡಿಗಾರ್, ಮುಂಬೈ, ಗಣೇಶ ಗುಡಿಗಾರ್ ನಾವೂರು, ದೇವಿಪ್ರಸಾದ್ ಎನ್. ಗುಡಿಗಾರ್ ಉಡುಪಿ, ಚಂದ್ರಶೇಖರ ಗುಡಿಗಾರ್ ಸವಣಾಲು, ಪ್ರಮೋದ್ ಗುಡಿಗಾರ್ ಉಡುಪಿ, ಸತ್ಯನಾರಾಯಣ ಗುಡಿಗಾರ್ ಅಂತರಬೈಲು, ವಿಶ್ವೇಶ್ ಗುಡಿಗಾರ್ ಅಂತರಬೈಲು ಉಪಸ್ಥಿತರಿದ್ದರು.

ಈ ವೇಳೆ ಮಕ್ಕಳಿಗೆ ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಸಂಜೆ ನಡೆದ ಸಮಾರೋಪದಲ್ಲಿ ಹಲವು ಗಣ್ಯರು ಭಾಗವಹಿಸಿ ಆಟೋಟ ಸ್ಪರ್ಧೆಯಲ್ಲಿ ಜಯಶಾಲಿಯಾದ ಎಲ್ಲಾ ಸ್ಪರ್ಧಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು..

ಈ ಸಂದರ್ಭದಲ್ಲಿ ರಾಷ್ಟ್ರೀಯ ತುಳು ಗುಡಿಗಾರರ ಸಂಘ ಸರ್ವ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಮಚ್ಚಿನ: ಬೈಕ್ ರೇಸ್ ನಲ್ಲಿ ಗಾಯಗೊಂಡ ನೌಷದ್ ರವರ ಆರೋಗ್ಯ ವಿಚಾರಿಸಿದ ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷರು, ಸದಸ್ಯರು

Suddi Udaya

ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ರಘು ಸಿ ರವರನ್ನು ಭೇಟಿ ಮಾಡಿದ ಬೆಳ್ತಂಗಡಿ ಪ.ಪಂ. ಹಾಗೂ ಗ್ರಾ.ಪಂ. ಪೌರ ಕಾರ್ಮಿಕರ ಸಂಘದ ಪದಾಧಿಕಾರಿಗಳು

Suddi Udaya

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ : ಬೆದ್ರಬೆಟ್ಟು ಮರಿಯಾಂಬಿಕಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya
error: Content is protected !!