23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ರಾಷ್ಟ್ರೀಯ ತುಳು ಗುಡಿಗಾರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ಕೆಸರು ಗದ್ದೆ ಕಾರ್ಯಕ್ರಮ

ಧರ್ಮಸ್ಥಳ : ರಾಷ್ಟ್ರೀಯ ತುಳು ಗುಡಿಗಾರರ ಸಂಘ ದಕ್ಷಿಣ ಕನ್ನಡ ಜಿಲ್ಲೆ -ಉಡುಪಿ ಜಿಲ್ಲೆ ಕಟ್ಟದಬೈಲು ಧರ್ಮಸ್ಥಳ ಇದರ ಆಶ್ರಯದಲ್ಲಿ ವಾರ್ಷಿಕ ಮಹಾಸಭೆ 2023-24 ಮತ್ತು ಕೆಸರು ಗದ್ದೆ ಕಾರ್ಯಕ್ರಮ ನ.17 ರಂದು ಶ್ರೀ ರಾಮಭಜನಾ ಮಂದಿರ ಕಟ್ಟದಬೈಲು ಇಲ್ಲಿ ನಡೆಯಿತು.

ಸಭಾಧ್ಯಕ್ಷತೆಯನ್ನು ರಾಷ್ಟ್ರೀಯ ತುಳು ಗುಡಿಗಾರ್ ಸಂಘದ ಅಧ್ಯಕ್ಷ ರವೀಂದ್ರ ಗುಡಿಗಾರ್ ವಹಿಸಿದರು.

ಮುಖ್ಯ ಅತಿಥಿಗಳಾಗಿ ರಾಷ್ಟ್ರೀಯ ತುಳು ಗುಡಿಗಾರ್ ಸಂಘ ಉಪಾಧ್ಯಕ್ಷರಾದ ಮಂಜುನಾಥ ಗುಡಿಗಾರ್ ಕಟ್ಟದಬೈಲು, ಶಾಂತಿರಾಜ್ ಗುಡಿಗಾರ್ ಅಳದಂಗಡಿ, ಜೊತೆ ಕಾರ್ಯದರ್ಶಿ ಆದರ್ಶ ಗುಡಿಗಾರ್, ಕೋಶಾಧಿಕಾರಿ ಕವಿತಾ ರಾಜೇಂದ್ರ ಗುಡಿಗಾರ್ ಅಂತರಬೈಲು, ನಿರ್ದೇಶಕರಾದ ರಮೇಶ್ ಗುಡಿಗಾರ್ ಅಂತರಬೈಲು, ಉದಯ ಗುಡಿಗಾರ್, ಮುಂಬೈ, ಗಣೇಶ ಗುಡಿಗಾರ್ ನಾವೂರು, ದೇವಿಪ್ರಸಾದ್ ಎನ್. ಗುಡಿಗಾರ್ ಉಡುಪಿ, ಚಂದ್ರಶೇಖರ ಗುಡಿಗಾರ್ ಸವಣಾಲು, ಪ್ರಮೋದ್ ಗುಡಿಗಾರ್ ಉಡುಪಿ, ಸತ್ಯನಾರಾಯಣ ಗುಡಿಗಾರ್ ಅಂತರಬೈಲು, ವಿಶ್ವೇಶ್ ಗುಡಿಗಾರ್ ಅಂತರಬೈಲು ಉಪಸ್ಥಿತರಿದ್ದರು.

ಈ ವೇಳೆ ಮಕ್ಕಳಿಗೆ ಪುರುಷರಿಗೆ, ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಸಂಜೆ ನಡೆದ ಸಮಾರೋಪದಲ್ಲಿ ಹಲವು ಗಣ್ಯರು ಭಾಗವಹಿಸಿ ಆಟೋಟ ಸ್ಪರ್ಧೆಯಲ್ಲಿ ಜಯಶಾಲಿಯಾದ ಎಲ್ಲಾ ಸ್ಪರ್ಧಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು..

ಈ ಸಂದರ್ಭದಲ್ಲಿ ರಾಷ್ಟ್ರೀಯ ತುಳು ಗುಡಿಗಾರರ ಸಂಘ ಸರ್ವ ಸದಸ್ಯರು ಉಪಸ್ಥಿತರಿದ್ದು ಸಹಕರಿಸಿದರು.

Related posts

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ಬುರುಡೆ ಪ್ರಕರಣ; ಬೆಂಗಳೂರು ಜಯಂತ್.ಟಿ ಮನೆಯಲ್ಲಿ ಎಸ್.ಐ.ಟಿ ಶೋಧ ಕಾರ್ಯ ಅಂತ್ಯ

Suddi Udaya

ಗುರುವಾಯನಕೆರೆ: ಅನಾರೋಗ್ಯದಿಂದ ಬಳಲುತ್ತಿರುವ ಆಟೋ ಚಾಲಕ ರಾಜೇಶ್ ಪೂಜಾರಿಯವರಿಗೆ ಕುವೆಟ್ಟು ಬಿಜೆಪಿ ಶಕ್ತಿ ಕೇಂದ್ರ ಹಾಗೂ ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ವತಿಯಿಂದ ರೂ. 25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಬೆಳ್ತಂಗಡಿ: ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ದತ್ತು ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!