September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಗ್ರಾಮ ಸಮಿತಿ ಸಭೆ

ನಾರಾವಿ : ನಾರಾವಿ ವಲಯ ಬಂಟರ ಸಂಘದ ಕುತ್ಲೂರು ಹಾಗೂ ನಾರಾವಿ ಗ್ರಾಮ ಸಮಿತಿಯ ಸಭೆಯು ಶಿವಣ್ಣ ಶೆಟ್ಟಿಯವರ ಮನೆಯಲ್ಲಿ ನಡೆಯಿತು.

ಸಭೆಯಲ್ಲಿ ನಾರಾವಿ ಕುತ್ಲೂರು ಗ್ರಾಮ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಡಾ| ಪ್ರಸಾದ್ ಶೆಟ್ಟಿ ನಾರಾವಿ, ಅಧ್ಯಕ್ಷರಾಗಿ ಪವನ್ ಶೆಟ್ಟಿ , ಕುತ್ಲೂರು ಕಾರ್ಯದರ್ಶಿಯಾಗಿ ಹರಿಪ್ರಸಾದ್ ರೈ ನಾರಾವಿ, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಪಾಣಾಲು, ಕೋಶಾಧಿಕಾರಿಯಾಗಿ ಶ್ರೀಮತಿ ಮಮತಾ ಶೆಟ್ಟಿ ಕುತ್ಲೂರು ಹಾಗೂ ಉಪಾಧ್ಯಕ್ಷರಾಗಿ ಶಿವಣ್ಣ ಶೆಟ್ಟಿ ಕುತ್ಲೂರು, ಬೋಜ ಶೆಟ್ಟಿ, ಕೂತ್ಲೂರು ಕೃಷ್ಣ ಶೆಟ್ಟಿ ನಾರಾವಿ ಆಯ್ಕೆಯಾಗಿರುತ್ತಾರೆ.

ಸಭೆಯಲ್ಲಿ ನಾರಾವಿ ವಲಯದ ಸಂಚಾಲಕ ರವಿ ಶೆಟ್ಟಿ, ವಿಶ್ವನಾಥ ಶೆಟ್ಟಿ, ಅಧ್ಯಕ್ಷರಾದ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಶಿವಣ್ಣ ಶೆಟ್ಟಿ , ಜೊತೆ ಕಾರ್ಯದರ್ಶಿ ಶ್ರೀಮತಿ ಸ್ವಾತಿ ಶೆಟ್ಟಿ, ಕೊಕ್ರಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾದ ರಾಜುಶೆಟ್ಟಿ, ಸುಲ್ಕೇರಿ ಗ್ರಾಮ ಸಮಿತಿಯ ಅಧ್ಯಕ್ಷ ಮಹಾಬಲ ಶೆಟ್ಟಿ, ಕುತ್ಲೂರು ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಶೆಟ್ಟಿ ಹಾಗೂ ಇನ್ನಿತರ ಬಂಟ ಬಂಧುಗಳು ಉಪಸ್ಥಿತರಿದ್ದರು.

Related posts

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya

ಬೆಳ್ತಂಗಡಿ ಮಾದರಿ ಶಾಲೆಗೆ ಲಯನ್ಸ್ ಕ್ಲಬ್ ನಿಂದ ಶುದ್ಧನೀರು ಯಂತ್ರ ಕೊಡುಗೆ

Suddi Udaya

ಮಾ.14-19 ಕೊಯ್ಯೂರು ಶ್ರೀ ಪಂಚದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಕಜಕೆ ಸ. ಹಿ ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಗೆ ಪೆನ್ನು ವಿತರಣೆ

Suddi Udaya

ಮಡವು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!