22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಬಂಧ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ.ಪ್ರೌ. ಶಾಲೆಯ ವಿದ್ಯಾರ್ಥಿನಿ ಇಂದುಮತಿ ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

ಬೆಳಾಲು: ಕನ್ನಡ ಸಾಂಸ್ಕೃತಿಕ ಸಂಘ, ವೈಜ್ಞಾನಿಕ ಮತ್ತು ಔದ್ಯೋಗಿಕ ಸಂಶೋಧನಾ ಮಂಡಳಿ, ರಾಷ್ಟ್ರೀಯ ವೈಮಾಂತರಿಕ್ಷ ಪ್ರಯೋಗ ಶಾಲೆಗಳು, ಬೆಂಗಳೂರು. ಇವರು ಪ್ರಕಟಿಸುವ ಕಣಾದ ಕನ್ನಡ ವಾರ್ಷಿಕ ವಿಜ್ಞಾನ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ, ರಾಜ್ಯದ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ವಿಷಯಗಳಲ್ಲಿ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆ ಬೆಳಾಲು ಇಲ್ಲಿನ ವಿದ್ಯಾರ್ಥಿನಿ ಕುಮಾರಿ ಇಂದುಮತಿ ಹಣ್ಣು, ತರಕಾರಿ, ಧಾನ್ಯಗಳ ಸಂರಕ್ಷಣಾ ವಿಧಾನಗಳಲ್ಲಿ ಪ್ರಗತಿ ಈ ವಿಷಯದಲ್ಲಿ ರಚಿಸಿದ ಪ್ರಬಂಧಕ್ಕೆ ರಾಜ್ಯ ಮಟ್ಟದಲ್ಲಿ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಈ ಪ್ರಬಂಧದ ಪ್ರಕಟಣೆಯು ನ. 27ರಂದು ಕಣಾದ ಪತ್ರಿಕೆಯ 50ನೇ ಸಂಚಿಕೆಯ ಪ್ರಕಟಣೆಯ ಸಂದರ್ಭದಲ್ಲಿ ಪ್ರಕಟಿಸಲಾಗುತ್ತದೆ ಎಂದು ಸಂಘಟಕರು ತಿಳಿಸಿರುವುದಾಗಿ ಶಾಲಾ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Related posts

ಬೈಕ್ ಗೆ ಅಡ್ಡ ಬಂದ ನಾಯಿ:ಪತ್ರಿಕೆ ವಿತರಕನಿಗೆ ಗಾಯ

Suddi Udaya

ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಲವಂತಿಗೆ ಗ್ರಾ.ಪಂ. ಎದುರು ಬಿಜೆಪಿ ಪ್ರತಿಭಟನೆ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಚಾರ್ಮಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಮೂಡುಬಿದಿರೆ ಸ್ವಸ್ತೀಶ್ರೀ ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿಯವರಿಂದ ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya
error: Content is protected !!