24.3 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

ಬೆಳ್ತಂಗಡಿ : ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿಯನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ನ.18 ರಂದು ಆಚರಿಸಲಾಯಿತು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ “ನಾನು” ಎಂಬ ಅಹಂ ನಮ್ಮಿಂದ ಹೋದಾಗ ಮಾತ್ರ ಭಗವಂತನನ್ನು ಕಂಡುಕೊಳ್ಳುವುದಕ್ಕೆ ಸಾಧ್ಯ. ಸಾತ್ವಿಕ ಬದುಕನ್ನು ಪೂರೈಸಿದರೆ ಮೋಕ್ಷವನ್ನು ಕಾಣಲು ಸಾಧ್ಯ. ಮೋಕ್ಷವನ್ನು ಕಾಣುವುದೇ ಮಾನವ ಜನ್ಮದ ಉದ್ದೇಶ. ಜನನ ಮರಣದ ಚಕ್ರದಿಂದ ಹೊರಗೆ ಬರುವುದಕ್ಕೆ ಕನಕದಾಸರಂತಹ ಸಂತರುಗಳು ದಾರಿ ತೋರಿಸಿದ್ದಾರೆ. ಭಕ್ತಿ ಪರಂಪರೆಯ ಶ್ರೇಷ್ಠರು ಕನಕದಾಸರು.

ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಕನಕದಾಸರ ಜೀವನ ಚರಿತ್ರೆಯ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಉಪ ತಹಸೀಲ್ದಾರ್ ಮಲ್ಲಪ್ಪ ನಡುಗಟ್ಟಿ, ಎ ಎಸ್ ಐ ದುರ್ಗಾಪ್ರಸಾದ್ ಉಪಸ್ಥಿತರಿದ್ದರು.

ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ನಿರೂಪಿಸಿದರು. ಪರಮೇಶ್ ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯನ್ನು ಹಾಡಿದರು.

Related posts

ಸುಲ್ಕೇರಿಮೊಗ್ರು: ಮನೆಯ ಮೇಲೆ ಮರ ಬಿದ್ದು ಅಪಾರ ಹಾನಿ

Suddi Udaya

ಬಂದಾರು: ಬಟ್ಟೆಯಂಗಡಿ ನಡೆಸುತ್ತಿದ್ದ ನಿರ್ಮಲ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಕಳಿಯ ಪ್ರಾ.ಕೃ.ಪ.ಸ. ಸಂಘಕ್ಕೆ ನೂತನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕವಿತಾ ಅಧಿಕಾರ ಸ್ವೀಕಾರ

Suddi Udaya

ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ವಾತ್ಸಲ್ಯ ಮನೆ ನಿರ್ಮಾಣದ ಕಾಮಗಾರಿಗೆ ಚಾಲನೆ

Suddi Udaya
error: Content is protected !!