July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

ಬೆಳ್ತಂಗಡಿ : ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿಯನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ನ.18 ರಂದು ಆಚರಿಸಲಾಯಿತು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ “ನಾನು” ಎಂಬ ಅಹಂ ನಮ್ಮಿಂದ ಹೋದಾಗ ಮಾತ್ರ ಭಗವಂತನನ್ನು ಕಂಡುಕೊಳ್ಳುವುದಕ್ಕೆ ಸಾಧ್ಯ. ಸಾತ್ವಿಕ ಬದುಕನ್ನು ಪೂರೈಸಿದರೆ ಮೋಕ್ಷವನ್ನು ಕಾಣಲು ಸಾಧ್ಯ. ಮೋಕ್ಷವನ್ನು ಕಾಣುವುದೇ ಮಾನವ ಜನ್ಮದ ಉದ್ದೇಶ. ಜನನ ಮರಣದ ಚಕ್ರದಿಂದ ಹೊರಗೆ ಬರುವುದಕ್ಕೆ ಕನಕದಾಸರಂತಹ ಸಂತರುಗಳು ದಾರಿ ತೋರಿಸಿದ್ದಾರೆ. ಭಕ್ತಿ ಪರಂಪರೆಯ ಶ್ರೇಷ್ಠರು ಕನಕದಾಸರು.

ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಕನಕದಾಸರ ಜೀವನ ಚರಿತ್ರೆಯ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಉಪ ತಹಸೀಲ್ದಾರ್ ಮಲ್ಲಪ್ಪ ನಡುಗಟ್ಟಿ, ಎ ಎಸ್ ಐ ದುರ್ಗಾಪ್ರಸಾದ್ ಉಪಸ್ಥಿತರಿದ್ದರು.

ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ನಿರೂಪಿಸಿದರು. ಪರಮೇಶ್ ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯನ್ನು ಹಾಡಿದರು.

Related posts

ಬಡಗಕಾರಂದೂರು ಸ.ಉ.ಪ್ರಾ.ಶಾಲಾ ಪ್ರತಿಭಾ ದಿನಾಚರಣೆ ಮತ್ತು ಗುರುವಂದನಾ ಕಾರ್ಯಕ್ರಮ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya

ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ಬಂಗೇರ ಬ್ರಿಗೇಡ್ ಮಾಲಾಡಿ ಪಂಚಾಯತ್ ವ್ಯಾಪ್ತಿಯ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಜೆರಾಲ್ಡ್ ಮೋರಸ್, ಪ್ರ. ಕಾರ್ಯದರ್ಶಿಯಾಗಿ ಪ್ರಶಾಂತ್ ಆಯ್ಕೆ

Suddi Udaya
error: Content is protected !!