September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

ಬೆಳ್ತಂಗಡಿ : ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿಯನ್ನು ಕನಕದಾಸರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ನ.18 ರಂದು ಆಚರಿಸಲಾಯಿತು.

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ “ನಾನು” ಎಂಬ ಅಹಂ ನಮ್ಮಿಂದ ಹೋದಾಗ ಮಾತ್ರ ಭಗವಂತನನ್ನು ಕಂಡುಕೊಳ್ಳುವುದಕ್ಕೆ ಸಾಧ್ಯ. ಸಾತ್ವಿಕ ಬದುಕನ್ನು ಪೂರೈಸಿದರೆ ಮೋಕ್ಷವನ್ನು ಕಾಣಲು ಸಾಧ್ಯ. ಮೋಕ್ಷವನ್ನು ಕಾಣುವುದೇ ಮಾನವ ಜನ್ಮದ ಉದ್ದೇಶ. ಜನನ ಮರಣದ ಚಕ್ರದಿಂದ ಹೊರಗೆ ಬರುವುದಕ್ಕೆ ಕನಕದಾಸರಂತಹ ಸಂತರುಗಳು ದಾರಿ ತೋರಿಸಿದ್ದಾರೆ. ಭಕ್ತಿ ಪರಂಪರೆಯ ಶ್ರೇಷ್ಠರು ಕನಕದಾಸರು.

ಕಂದಾಯ ನಿರೀಕ್ಷಕ ಪಾವಡಪ್ಪ ದೊಡ್ಡಮನಿ ಕನಕದಾಸರ ಜೀವನ ಚರಿತ್ರೆಯ ಬಗ್ಗೆ ತಿಳಿಸಿದರು. ವೇದಿಕೆಯಲ್ಲಿ ಉಪ ತಹಸೀಲ್ದಾರ್ ಮಲ್ಲಪ್ಪ ನಡುಗಟ್ಟಿ, ಎ ಎಸ್ ಐ ದುರ್ಗಾಪ್ರಸಾದ್ ಉಪಸ್ಥಿತರಿದ್ದರು.

ಗೃಹರಕ್ಷಕ ದಳದ ಘಟಕಾಧಿಕಾರಿ ಜಯಾನಂದ ನಿರೂಪಿಸಿದರು. ಪರಮೇಶ್ ವಂದಿಸಿದರು. ಶಾಲಾ ವಿದ್ಯಾರ್ಥಿನಿಯರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯನ್ನು ಹಾಡಿದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಅವಶ್ಯವಿರುವ ರಸ್ತೆ ಮತ್ತು ಸೇತುವೆ ರಚನೆ ಕಾಮಗಾರಿ ಅನುದಾನಕ್ಕೆ ಲೋಕೋಪಯೋಗಿ ಸಚಿವರಿಗೆ ಮನವಿ

Suddi Udaya

ಇಂದಬೆಟ್ಟು ಎಮ್.ಜೆ.ಎಮ್ ಮಸೀದಿಯಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya

ನಾವೂರು ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ

Suddi Udaya

ರೆಖ್ಯಾ ಎಂಜಿರ ಎಂಬಲ್ಲಿ ಆಪಲ್ ಲೋಡ್ ಗಾಡಿ ಪಲ್ಟಿ : ಇಬ್ಬರು ಪ್ರಾಣಾಪಾಯದಿಂದ ಪಾರು

Suddi Udaya

ಮಚ್ಚಿನ: ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!