ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ವಕೀಲರ ಸಂಘಕ್ಕೆ ನ್ಯಾಯಮೂರ್ತಿ ರಾಜೇಶ್‌ ರೈ ಕೈರಂಗಳ ಭೇಟಿ

ಬೆಳ್ತಂಗಡಿ: ವಕೀಲರು ವೃತ್ತಿಯಲ್ಲಿ ಪ್ರಕರಣಗಳ ಬಗ್ಗೆ ಸತತ ಪರಿಶ್ರಮ ಮತ್ತು ಅದ್ಯಯನ ನಡೆಸಿ ಕೆಲಸ ನಿರ್ವಹಿಸಿದಲ್ಲಿ ಕಕ್ಷಿಗಾರರಿಗೆ ನ್ಯಾಯ ದೊರಕುವ ಜೊತೆಗೆ ವೃತ್ತಿಯಲ್ಲಿ ಯಶಸ್ಸು ಕಾಣಲು ಸಾದ್ಯ ಎಂದು ಕರ್ನಾಟಕ ಉಚ್ಚ ನ್ಯಾಯಾಲಯದ ಗೌರವಾನ್ವಿತ ನ್ಯಾಯಮೂರ್ತಿಗಳಾದ ರಾಜೇಶ್‌ರೈ, ಕೈರಂಗಳ ಅಭಿಪ್ರಾಯಪಟ್ಟಿದ್ದಾರೆ.

ಅವರು ನ. 16 ರಂದು ಬೆಳ್ತಂಗಡಿ ವಕೀಲರ ಸಂಘಕ್ಕೆ ಭೇಟಿ ನೀಡಿ ವಕೀಲರನ್ನುದ್ದೇಶಿ ಮಾತನಾಡುತ್ತಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ವಕೀಲರುಗಳು ಅಧ್ಯಯನಶೀಲತೆಯ ಮೂಲಕ ಪಾಂಡಿತ್ಯ ಹೊಂದಿದ್ದು ನ್ಯಾಯಂಗದಲ್ಲಿ ತಮ್ಮದೇ ಆದ ಗೌರವವನ್ನು ಹೊಂದಿದ್ದಾರೆ ಎಂದವರು ಈ ಸಂಧರ್ಭದಲ್ಲಿ ಹೇಳಿದರು.

ಯುವ ವಕೀಲರು ನ್ಯಾಯಲಯದ ಕಲಾಪಗಳಲ್ಲಿ ಉತ್ಸಾಹದಿಂದ ಭಾಗವಹಿಸಿ ಹಿರಿಯ ನ್ಯಾಯವಾದಿಗಳು ಪ್ರಕರಣ ನಡೆಸುವ ಸಂದರ್ಭವನ್ನು ಆಲಿಸುವ ಮೂಲಕ ಸಮಯದ ಸದ್ಬಳಕೆ ಮಾಡಿಕೊಳ್ಳಬೇಕೆಂದು ಅವರು ಯುವ ವಕೀಲರಿಗೆ ಕರೆ ನೀಡಿದರು.

ಈ ಸಂದರ್ಭದಲ್ಲಿ 6೦ ವರ್ಷ ಹಳೆಯದಾದ ಬೆಳ್ತಂಗಡಿ ನ್ಯಾಯಾಲಯದ ಸಂಕೀರ್ಣವನ್ನು ವೀಕ್ಷಿಸಿ ಹೊಸ ಕಟ್ಟಡ ಮಂಜೂರಾತಿಗಾಗಿ ಸರಕಾರದ ಮಟ್ಟದಲ್ಲಿ ಒತ್ತಡ ತರಲು ವಕೀಲರ ಸಂಘದ ಜೊತೆ ಕೈ ಜೋಡಿಸುವುದಾಗಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ವಹಿಸಿದ್ದರು.

ಪ್ರಧಾನ ಕಾರ್ಯದರ್ಶಿ ನವೀನ್ ಬಿ. ಕೆ ಸ್ವಾಗತಿಸಿ, ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್, ಎ ಕಾರ್ಯಕ್ರಮ ನಿರೂಪಿಸಿದರು.

Related posts

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಬಜಿರೆ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಅಟ್ಲಾಜೆ ದ.ಕ.ಜಿ.ಪ.ಕಿ.ಪ್ರಾ ಶಾಲೆಯಲ್ಲಿ ಅ೦ತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಎ.19&20: ಬೆಳ್ತಂಗಡಿ ಶೃಂಗಾರ್ ಜುವೆಲ್ಲರ್ಸ್ ನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ವಿಶೇಷ ಕೊಡುಗೆ

Suddi Udaya

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!