22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ B ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ವಿಜಯ ಆರ್ ರವರ ಅಧ್ಯಕ್ಷತೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಸಮೃದ್ಧಿ ಬಿ ಸಂಘದ ಸದಸ್ಯರು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಅಶೋಕ್ ಕುಮಾರ್ ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಮೀನಾರವರು ಮಂಡಿಸಿದರು,
ಯೋಜನೆಯ ಕೃಷಿ ಅಧಿಕಾರಿಯಾದ ರಾಮಕುಮಾರ್ ಸಂಘಟನಾತ್ಮಕವಾಗಿ ಸಂಘವನ್ನು ಕಟ್ಟಿಕೊಂಡು ಒಕ್ಕೂಟದ ವ್ಯವಸ್ಥೆಗೆ ತಂದು ಸಂಘದ ಸಂಪೂರ್ಣ ಬೆಳವಣಿಗೆಗೆ ಒಕ್ಕೂಟವು ನಿರಂತರವಾಗಿ ಸಹಕಾರವನ್ನು ನೀಡಿ ಯೋಜನೆಯ ಎಲ್ಲ ಸೇವೆಗಳನ್ನು ಸದಸ್ಯರಿಗೆ ತಲುಪಿಸಲು ಒಕ್ಕೂಟವು ಯೋಜನೆಯ ಕೊಂಡಿಯಾಗಿ ಸಂಘಕ್ಕೆ ಸೇವೆಯನ್ನು ನೀಡುತ್ತಿದೆ ಎಂದರು.


ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸದಸ್ಯರಿಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.
ವಲಯ ಮೇಲ್ವಿಚಾರಕರು ಜನಾರ್ದನ್, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ, ನಿಕಟಪೂರ್ವ ಅಧ್ಯಕ್ಷರು ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು. ರವಿ ಎನ್ ಸ್ವಾಗತಿಸಿ, ವಸಂತ ವಂದಿಸಿದರು.

Related posts

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ವಿರುದ್ಧ ಕೇಸು ದಾಖಲು: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಎಂ. ಖಂಡನೆ

Suddi Udaya

ಧರ್ಮಸ್ಥಳ: ನೇತ್ರಾವತಿ ನದಿಗೆ ಹಾರಿ ದಂಪತಿಗಳು ಆತ್ಮಹತ್ಯೆ: ದೊಂಡೋಲೆ ಪವರ್ ಪ್ರಾಜೆಕ್ಟ್ ಬಳಿ ಮೃತದೇಹ ಪತ್ತೆ

Suddi Udaya

ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾದಿಕಾರಿಗಳ ಸಭೆ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಚುನಾವಣೆ

Suddi Udaya
error: Content is protected !!