September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟ ಮುಂಡಾಜೆ B ಒಕ್ಕೂಟದ ತ್ರೈಮಾಸಿಕ ಸಭೆಯು ಒಕ್ಕೂಟದ ಅಧ್ಯಕ್ಷರಾದ ವಿಜಯ ಆರ್ ರವರ ಅಧ್ಯಕ್ಷತೆಯಲ್ಲಿ ಮುಂಡಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ತ್ರೈಮಾಸಿಕ ಸಭೆಯ ಜವಾಬ್ದಾರಿಯನ್ನು ಸಮೃದ್ಧಿ ಬಿ ಸಂಘದ ಸದಸ್ಯರು ವಹಿಸಿಕೊಂಡಿದ್ದು, ಜವಾಬ್ದಾರಿ ಸಂಘದ ಸಾಧನೆಯ ವರದಿಯನ್ನು ಅಶೋಕ್ ಕುಮಾರ್ ಮಂಡಿಸಿದರು. ಒಕ್ಕೂಟದ ಗತ ಸಭೆಯ ವರದಿಯನ್ನು ಮೀನಾರವರು ಮಂಡಿಸಿದರು,
ಯೋಜನೆಯ ಕೃಷಿ ಅಧಿಕಾರಿಯಾದ ರಾಮಕುಮಾರ್ ಸಂಘಟನಾತ್ಮಕವಾಗಿ ಸಂಘವನ್ನು ಕಟ್ಟಿಕೊಂಡು ಒಕ್ಕೂಟದ ವ್ಯವಸ್ಥೆಗೆ ತಂದು ಸಂಘದ ಸಂಪೂರ್ಣ ಬೆಳವಣಿಗೆಗೆ ಒಕ್ಕೂಟವು ನಿರಂತರವಾಗಿ ಸಹಕಾರವನ್ನು ನೀಡಿ ಯೋಜನೆಯ ಎಲ್ಲ ಸೇವೆಗಳನ್ನು ಸದಸ್ಯರಿಗೆ ತಲುಪಿಸಲು ಒಕ್ಕೂಟವು ಯೋಜನೆಯ ಕೊಂಡಿಯಾಗಿ ಸಂಘಕ್ಕೆ ಸೇವೆಯನ್ನು ನೀಡುತ್ತಿದೆ ಎಂದರು.


ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸದಸ್ಯರಿಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿದರು.
ವಲಯ ಮೇಲ್ವಿಚಾರಕರು ಜನಾರ್ದನ್, ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ, ನಿಕಟಪೂರ್ವ ಅಧ್ಯಕ್ಷರು ಪದಾಧಿಕಾರಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು. ರವಿ ಎನ್ ಸ್ವಾಗತಿಸಿ, ವಸಂತ ವಂದಿಸಿದರು.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ: ರೂ. 65ಲಕ್ಷ ಲಾಭ, ಶೇ.15 ಡಿವಿಡೆಂಟ್

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ‌ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 233.13 ಕೋಟಿ ವ್ಯವಹಾರ, ಸದಸ್ಯರಿಗೆ ಶೇ. 15 ಡಿವಿಡೆಂಟ್

Suddi Udaya

ಕೊಕ್ಕಡ: ರಾಮ ಸೇವಾ ಮಂದಿರದ ಪಾಕಶಾಲೆಯ ಕಾಮಗಾರಿಗೆ ರಾಘವೇಂದ್ರ ನಾಯಕ್ ಬರ್ಗುಳ ರಿಂದ ರೂ. 1 ಲಕ್ಷ ದೇಣಿಗೆ

Suddi Udaya

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
error: Content is protected !!