25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

ಬೆಳ್ತಂಗಡಿ: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ನ.17 ರಂದು ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಸಮಾರಂಭ ನಡೆಯಿತು.

ಬೆಳ್ತಂಗಡಿ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಶಶಿಧ‌ರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಉಪಸ್ಥಿತಿಯಲ್ಲಿ ಬೆಳ್ತಂಗಡಿ ಘಟಕದ ವತಿಯಿಂದ ಸದಾಶಿವ ಶೆಟ್ಟಿಯವರಿಗೆ ಸನ್ಮಾನ ನಡೆಯಿತು.

ಈ ವೇಳೆ ಪಟ್ಲ ಪಟ್ಲ ಪೌಂಡೇಷನ್‌ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪದಾಧಿಕಾರಿಗಳಾದ ಭುಜಬಲಿ ಧರ್ಮಸ್ಥಳ, ಉಮೇಶ್ ಶೆಟ್ಟಿ ಉಜಿರೆ, ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಭುವನೇಶ್ ಗೇರುಕಟ್ಟೆ, ವಸಂತ ಶೆಟ್ಟಿ ಬೆಳ್ತಂಗಡಿ, ನವೀನ್ ಸಾಮಾನಿ ಕರಂಬಾರು ಬೀಡು, ಕೃಷ್ಣ ಶೆಟ್ಟಿ ತಾರೆಮಾರ್‌, ಉಪಸ್ಥಿತರಿದ್ದರು.

Related posts

ಮೂಡುಕೋಡಿ ‘ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಮಾದರಿ ಕಾರ್ಯ

Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ಪಟ್ರಮೆಯ ಹಿಂದೂ ಯುವಕನ ಜೊತೆ ನೆಲ್ಲಿಕಾರಿನ ಮುಸ್ಲಿಂ ಯುವತಿ ವಿವಾಹ

Suddi Udaya

ಕಡಿರುದ್ಯಾವರ: ಸ್ಥಳೀಯರಿಂದ ಶ್ರಮದಾನದ ಮೂಲಕ ರಸ್ತೆ ಸಮತಟ್ಟು

Suddi Udaya

ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನ ಮಿತ್ತಬಾಗಿಲು:ಶಿಲಾಮಯ ಧ್ವಜ ಸ್ತಂಭದ ವಿಜೃಂಭಣೆಯ ಮೆರವಣಿಗೆ

Suddi Udaya

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

Suddi Udaya
error: Content is protected !!